4:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಬೆಳಗಾವಿಯಲ್ಲಿ ವಿಶೇಷಚೇತನರ ಸೌರ ಸ್ವಉದ್ಯೋಗ ಸಮ್ಮೇಳನ: ಸೌರ ಉದ್ಯಮಿಗಳು ಭಾಗಿ

21/11/2023, 19:06

ಶಿವರಾಯ ಲಕ್ಷ್ಮಣ ಕರ್ಕರಮುಂಡಿ ಬೆಳಗಾವಿ

info.reporterkarnatakarma@gmail.com

ಸೆಲ್ಕೋ ಫೌಂಡೇಶನ್ ಇಂಡಿಯಾ ಸಂಸ್ಥೆ, ಎಪಿಡಿ ಸಂಸ್ಥೆ ಬೆಳಗಾವಿ, ಬರ್ಡ್ ಸಂಸ್ಥೆ,ಬೆಳಗಾವಿಯ ವಿಕಲಚೇತನರ ಸಬಲೀಕರಣ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶೇಷ ಚೇತನರ ಸೌರ ಸ್ವ ಉದ್ಯೋಗ ಸಮ್ಮೇಳನವನ್ನು ನಗರದ ಕುಮಾರಗಂಧರ್ವ ರಂಗ ಮಂದಿರದಲ್ಲಿ ಜಿಲ್ಲಾ ಪಂಚಾಯತ್ ಸಿಇಒ
ಹರ್ಷಲ್ ಬೋಯರ್ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಹರ್ಷಲ್ ಬೋಯರ್, ಸೌರಶಕ್ತಿ ಬಳಸಿಕೊಂಡು ಸ್ವಯಂ ಉದ್ಯೋಗದ ಅವಕಾಶಗಳನ್ನು ಹೆಚ್ಚಿಸುವ ಮೂಲಕ ಸಮಾಜದ ಅಭಿವೃದ್ಧಿಗೆ ಸೆಲ್ಕೋ ಫೌಂಡೇಶನ್ ಸಂಸ್ಥೆ ಉತ್ತಮ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ಮಹಾಪ್ರಬಂಧಕರಾದ ಪ್ರಸನ್ನ ಹೆಗಡೆ ಅವರು ಮಾತನಾಡಿ, ಸೌರಶಕ್ತಿಯು ಕೇವಲ ಬೆಳಕು ನೀಡುವುದಲ್ಲದೆ ಜೀವನ ಕಟ್ಟಿಕೊಡುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಗ್ರಾಮೀಣ ಭಾಗದ ಕಟ್ಟಕಡೆ ವ್ಯಕ್ತಿಗೂ ಸೌರಶಕ್ತಿಯನ್ನು ತಲುಪಿಸುತ್ತಿದ್ದೇವೆ ಎಂದರು.
ದಿ ಅಸೋಶಿಯೇಷನ್ ಆಫ್ ಪೀಪಲ್ ವಿತ್ ಡಿಸೆಬಿಲಿಟಿಯ(ಎಪಿಡಿ) ವಿಭಾಗೀಯ ನಿರ್ದೇಶಕರಾದ ರಮೇಶ್ ಗೊಂಗಡಿ ಮಾತನಾಡಿ, ವಿಶೇಷಚೇತನರನ್ನು ಸುಶಿಕ್ಷಿತರನ್ನಾಗಿಸುವುದರ ಜೊತೆಗೆ ಸೆಲ್ಕೋ ಸಹಯೋಗದೊಂದಿಗೆ ಅವರಿಗೆ ಉದ್ಯೋಗ ಕಲ್ಪಿಸುವ ಕೆಲಸ ಮಾಡುತ್ತಿದೆ ಎಂದರು.
ಬಾಗಲಕೋಟೆಯ ಬರ್ಡ್ಸ್ ಸಂಸ್ಥೆಯ ಮಹಾಂತೇಶ್ ಅಗಸಿ ಮುಂದಿನ ಅವರು ಮಾತನಾಡಿ, ಕಳೆದ 8 ವರ್ಷಗಳಿಂದ ಸೆಲ್ಕೋ ಸಂಸ್ಥೆಯ ಜೊತೆ ಸೇರಿ ಅನೇಕ ವಿಶೇಷಚೇತನರಿಗೆ ಉದ್ಯೋಗ ಕಲ್ಪಿಸುವಲ್ಲಿ ಯಶಸ್ವಿಯಾಗಿದ್ದೇವೆ ಎಂದರು.
ಮಾಜಿ ಶಾಸಕರು ಹಾಗೂ ನಾಗನೂರ ಬರ್ಡ್ಸ್ ಸಂಸ್ಥೆ ಅಧ್ಯಕ್ಷ ಆರ್. ಎಮ್. ಪಾಟೀಲ ಅವರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಎರಡು ವಿಶೇಷ ಗುಂಪು ಚರ್ಚೆಗಳನ್ನು ಸೆಲ್ಕೋ ಫೌಂಡೇಷನ್ ನ ಹಿರಿಯ ನಿರ್ವಾಹಕರಾದ ಸುರಭಿ ರಾಜಗೋಪಾಲ್ ಮತ್ತು ಸೆಲ್ಕೋ ಫೌಂಡೇಷನ್ ನ ಪ್ರಾಜೆಕ್ಟ್ ಮ್ಯಾನೇಜರ್ ನಾಗೇಶ್ ರಾವ್ ನಡೆಸಿಕೊಟ್ಟರು.
ಇದೇ ಸಂದರ್ಭದಲ್ಲಿ ಕೆಲವು ಸೌರ ಉದ್ಯಮಿಗಳು ತಮ್ಮ ಅನುಭವಗಳನ್ನು ಹಂಚಿಕೊಂಡರು. ಸೆಲ್ಕೋದ ಬೆಳಗಾವಿ ಏರಿಯಾ ಮ್ಯಾನೇಜರ್ ವಿನಾಯಕ ಹೆಗಡೆ ಕಾರ್ಯಕ್ರಮ ನಿರ್ವಹಣೆ ಮಾಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು