4:43 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ನರಭಕ್ಷಕ ವ್ಯಾಘ್ರನ ಆರ್ಭಟಕ್ಕೆ ಮತ್ತೊಬ್ಬ ದನಗಾಹಿ ಮಹಿಳೆ ಬಲಿ: ಕಾಡಿಗೆ ಎಳೆದೊಯ್ದ ಹುಲಿ; ಅರಣ್ಯ ಇಲಾಖೆ ವಿರುದ್ಧ ಭಾರೀ ಆಕ್ರೋಶ

25/11/2023, 13:01

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಹಾಡಹಗಲೇ ನರಭಕ್ಷಕ ಹುಲಿಯೊಂದು ಕುರಿಗಾಹಿ ಮಹಿಳೆ ಮೇಲೆ ದಾಳಿ ನಡೆಸಿ ಕೊಂದು ಹಾಕಿದರ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ರತ್ನಮ್ಮ(50) ಎಂಬುವರೇ ನರಭಕ್ಷಕ ಹುಲಿಗೆ ಬಲಿಯಾದ ಮೃತ ಮಹಿಳೆ.


ನಂಜನಗೂಡು ತಾಲೂಕಿನ ಬಳ್ಳೂರು ಹುಂಡಿ ಗ್ರಾಮದ ವೆಂಕಟಯ್ಯ ಎಂಬುವರ ಪತ್ನಿ ಈ ಮೃತ ಮಹಿಳೆ.
ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಹೆಡಿಯಾಲ ಸಮೀಪವಿರುವ ಮಹದೇವ ನಗರ ಗ್ರಾಮದ ನರ್ಸರಿ ಸಮೀಪದ ಬಳಿ ತಮ್ಮ ಜಮೀನಿನಲ್ಲಿ ಜಾನುವಾರು ಮೇಯಿಸುತ್ತಿದ್ದ ವೇಳೆ ಮಹಿಳೆಯ ಮೇಲೆ ವ್ಯಾಘ್ರ ದಾಳಿ ನಡೆಸಿದೆ. ಹುಲಿಯು
ರತ್ನಮ್ಮ ಅವರನ್ನು ಜಮೀನಿನಿಂದ ಕಾಡಿನೊಳಗೆ ಎಳೆದೊಯ್ದಿದೆ.
ನರಭಕ್ಷಕ ಹುಲಿಗೆ ಬಲಿಯಾದ ರತ್ನಮ್ಮಳ ಮೃತದೇಹವನ್ನು ಕಾಡಿನಿಂದ ಹುಡುಕಿ ಗ್ರಾಮಸ್ಥರು ತಂದಿದ್ದಾರೆ.
ಸುಮಾರು ಒಂದು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ವೀರಭದ್ರ ಭೋವಿ ಎಂಬ ದನ ಗಾಹಿ ಮೇಲೆ ನರಭಕ್ಷಕ ಹುಲಿ ದಾಳಿ ಮಾಡಿತ್ತು. ನರಭಕ್ಷಕ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಮುಂದಾಗದ ಕಾರಣ ಈಗ ಮತ್ತೆ ದನಗಾಯಿ ಮಹಿಮೆ ಬಲಿಯಾಗಿದ್ದಾರೆ. ಹೆಡಿಯಾಲ ಬಳ್ಳೂರು ಹುಂಡಿ ಮಹದೇವ ನಗರ ಗ್ರಾಮದ ಸುತ್ತಮುತ್ತಲ ವಾಸಿಗಳು ಈಗ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ.
ಹೆಡಿಯಾಲ ಅರಣ್ಯ ಇಲಾಖೆಯ ಆರ್‌ಎಫ್‌ಒ ನಾರಾಯಣ ಎಸಿಎಫ್ ಪರಮೇಶ್ ನೇತೃತ್ವದಲ್ಲಿ ಮೃತ ಮಹಿಳೆ ರತ್ನಮಳ ಮೃತ ದೇಹವನ್ನು ಹುಡುಕಿ ಗ್ರಾಮಕ್ಕೆ ತರಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು