3:19 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಥೇಟ್ ಮಹಾತ್ಮ ಗಾಂಧೀಜಿಯಂತೆ ಇವರ ವೇಷ!: ರಾಷ್ಟ್ರಪಿತ ಪುತ್ಥಳಿಯಂತೆ ತಾಸುಗಟ್ಟಲೆ ಕದಲದೆ ನಿಲ್ಲುತ್ತಾರೆ!!

25/11/2023, 19:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಉದರ ನಿಮಿತ್ತಂ ಬಹುಕೃತ ವೇಷಂ ಎಂಬಂತೆ ಮನುಷ್ಯ ತನ್ನ ಜೀವನೋಪಾಯ ಹಾಗೂ ಹೊಟ್ಟೆಪಾಡಿಗಾಗಿ ಏನೆಲ್ಲಾ ಮಾಡುತ್ತಾನೆ ನೀವೇ ನೋಡಿ.
ಇಲ್ಲೊಬ್ಬ ವ್ಯಕ್ತಿ ತನ್ನ ಹೊಟ್ಟೆಪಾಡಿಗಾಗಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರನ್ನೆ ನಾಚಿಸುವಂತಹ ವೇಷದಾರಿಯಾಗಿ ನಿಂತಿದ್ದಾನೆ.
ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದ ಮುಂಭಾಗ ದಿಢೀರ್ ಪ್ರತ್ಯಕ್ಷವಾದ ಈ ಮಹಾತ್ಮ ನೋಡುವುದಕ್ಕೆ ಥೇಟ್ ಮಹಾತ್ಮ ಗಾಂಧಿಯಂತೆಯೇ ಕಾಣುತ್ತಿದ್ದಾನೆ. ಇವನು ನಿಂತಿರುವ ಭಂಗಿ ಯಾವುದೇ ಮಹಾತ್ಮ ಗಾಂಧೀಜಿಯವರ ಚಿತ್ರ ಹಾಗೂ ಪುತ್ತಳಿಗಿಂತ ಕಮ್ಮಿ ಇಲ್ಲ. ತಲೆಯಿಂದ ಉಂಗುಷ್ಟದವರೆಗೂ ಒಂದು ರೀತಿ ಸಿಲ್ವರ್ ಬಣ್ಣ ಹಚ್ಚಿಕೊಂಡು ಕಣ್ಣಿಗೆ ಕನ್ನಡಕ ಕೈಯಲ್ಲಿ ಕೋಲು ಹಿಡಿದು ಕೊಂಡು ನಿಂತಿರುವ ದೃಶ್ಯ ಗಾಂಧೀಜಿ ಅವರ ಪುತ್ಥಳಿ ಯಂತೆ ಭಾಸವಾಗುತ್ತಿದೆ.


ಸುಡು ಬಿಸಿಲಿನಲ್ಲಿಯೇ ಯಾವುದೇ ಚಲನವಲನವಿಲ್ಲದೆ, ಕಣ್ಣು ಸಹ ಮಿಟುಕಿಸದೆ, ಮಾತನ್ನು ಸಹ ಆಡದೇ ನಿರ್ಜೀವ ಶಿಲೆಯಂತೆಯೇ ನಿಂತಿರುವ ಈತನ ಭಂಗಿ ನಿಜಕ್ಕೂ ಮೆಚ್ಚುವಂಥದ್ದೆ ಆಗಿದೆ.
ದೇವಾಲಯಕ್ಕೆ ಬರುವ ಭಕ್ತರು ಇದನ್ನು ನೋಡಿ ಇದೊಂದು ಪುತ್ತಳಿಯೇ ಇರಬೇಕು ಎಂದು ಭಾವಿಸಿದರೆ ಮತ್ತೆ ಕೆಲವರು ಆತನ ಮೈ ಕೈ ಹಾಗೂ ಕೋಲನ್ನು ಮುಟ್ಟಿ ಇದು ಪುತ್ಥಳಿಯೋ ಅಥವಾ ಮನುಷ್ಯನೋ ಎಂದು ಖಾತರಿಪಡಿಸಿಕೊಳ್ಳುತ್ತಿದ್ದರು.
ಕೆಲವು ಭಕ್ತರು ಭಕ್ತಿಯಿಂದ ಮುಟ್ಟಿ ನಮಸ್ಕರಿಸಿದರೆ ಮತ್ತೆ ಕೆಲವರು ಸೆಲ್ಫಿ ಹಾಗೂ ಫೋಟೋ ತೆಗೆಸಿಕೊಂಡು ಖುಷಿಪಟ್ಟು ತಮ್ಮ ಕೈಲಾದ ಹಣ ಸಹಾಯ ಮಾಡುತ್ತಿದ್ದರು.
ಒಟ್ಟಾರೆ ಯಾರೇ ಮುಟ್ಟಿದರು ಏನೇ ಮಾತನಾಡಿದರು ತಾನು ಮಾತ್ರ ಯಾವುದೇ ಪ್ರತಿಕ್ರಿಯೆ ನೀಡದೆ ನಿರ್ಜೀವ ವಸ್ತುವಿನಂತೆ ನಿಂತುಕೊಂಡೇ ಎಲ್ಲಾ ಸಾರ್ವಜನಿಕರ ಗಮನ ಸೆಳೆದ ಮಹಾತ್ಮ ಗಾಂಧಿ ವೇಷದಾರಿ.

ಇತ್ತೀಚಿನ ಸುದ್ದಿ

ಜಾಹೀರಾತು