11:48 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಲೆನಾಡ ಕಾಶ್ಮೀರ ಬಸರೀಕಟ್ಟೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಸಂಪನ್ನ: ಭುವನೇಶ್ವರಿ ದೇವಿಯ ವೈಭವದ ಮೆರವಣಿಗೆ

28/11/2023, 19:39

ಶಶಿ ಬೆತ್ತದಕೊಳಲು ಕೊಪ್ಪ

info.reporterarnataka@gmail.com

ಕೊಪ್ಪ(reporterkarnataka.com): ಕನ್ನಡ ರಾಜ್ಯೋತ್ಸವ ಆಚರಣ ಸಮಿತಿ “ಗೆಳೆಯರ ಬಳಗ” ಬಸರೀಕಟ್ಟೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಸೋಮವಾರದಂದು ಆಚರಿಸಲಾಯಿತು.
ಬಸರೀಕಟ್ಟೆ ಅಂದ್ರೆನೆ ಚಂದದ ಊರು ಮಲೆನಾಡ ಕಾಶ್ಮೀರ ಅಂತಾನೆ ಹೇಳ್ತಾರೆ ಪ್ರವಾಸಿಗರು. ಭೂಲೋಕದ ಸ್ವರ್ಗ ಅಂತಾನೂ ಕರೆಸಿಕೊಳ್ಳುವ ಬಸರೀಕಟ್ಟೆಯಲ್ಲಿ ಅದ್ಧೂರಿ ಕನ್ನಡ ರಾಜ್ಯೋತ್ಸವ ಆಚರಣೆ ಅಂದ್ರೆ ಕೇಳ್ಬೇಕ?
ಅಬ್ಬಬ್ಬಾ ನೋಡೋಕೆ ಎರಡು ಕಣ್ಣುಗಳು ಸಾಲದಾಯ್ತು.
ಕನ್ನಡ ಮನಸ್ಸುಗಳನ್ನು ಒಂದೆಡೆ ನೋಡಿ ಕನ್ನಡಾಂಬೆ ಕೂಡ ಒಮ್ಮೆ ಖುಷಿ ಪಟ್ಟಂತೆ ಅನ್ನಿಸಿ ಬಿಡ್ತು..


ಬೆಳಗ್ಗೆ ನಡೆದ ತಾಯಿ ಭುವನೇಶ್ವರಿ ದೇವಿಯ ಮೆರವಣಿಗೆಯಲ್ಲಿ ಶಾಲಾ ಮಕ್ಕಳು ಗ್ರಾಮಸ್ಥರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿ ಕನ್ನಡ ತಾಯಿಗೆ ಜೈಕಾರ ಹಾಕಿದರು. ಮೆರವಣಿಗೆಯಲ್ಲಿ ವಿವಿಧ ವೇಷಗಳ ನೃತ್ಯವೂ ಇತ್ತು. ಈ ಭಾರೀಯ ಭುವನೇಶ್ವರಿ ದೇವಿಯ ಸ್ತಬ್ಧಚಿತ್ರವಂತು ಆಕರ್ಷಣೆಯ ಕೇಂದ್ರಬಿಂದುವಾಗಿತ್ತು.
ನಂತರ ಸಭಾ ಕಾರ್ಯಕ್ರಮವೂ ಪ್ರಧಾನ ಸಂಚಾಲಕ ವಿಜಯಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಊರಿನ ಸಾಧಕರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಈ ಭಾರೀ ಊರಿಗೆ ಕೀರ್ತಿ ತಂದ ಮಕ್ಕಳನ್ನು ವಿಶೇಷವಾಗಿ ಸನ್ಮಾನಿಸಿ ಅವರ ಸಾಧನೆಯನ್ನು ಕೊಂಡಾಡಲಾಯಿತು..
ಬಸರೀಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಸ್ಸಾಂ ಮೂಲದ ವಿದ್ಯಾರ್ಥಿನಿ ಕನ್ನಡ ಬಾವುಟ ಮತ್ತು ದೇಶದ ಬಾವುಟ ಬಿಡಿಸುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಎಲ್ಲರ ಮೆಚ್ಚುಗೆಗೆ ಪಾತ್ರಳಾದಳು.

ಇತ್ತೀಚಿನ ಸುದ್ದಿ

ಜಾಹೀರಾತು