1:26 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಥೊಲಿಕ್ ಸಭಾ ಆಂಜೆಲೊರ್ ಘಟಕದಿಂದ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟ: ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡಕ್ಕೆ ಟ್ರೋಫಿ; ಥ್ರೊಬಾಲ್ ನಲ್ಲಿ ಬೊಂದೆಲ್ ತಂಡ ಪ್ರಥಮ

11/12/2023, 19:01

ಮಂಗಳೂರು(reporterkarnataka.com): ಮಂಗಳೂರು ಕಥೊಲಿಕ್ ಸಭಾ ಪ್ರದೇಶದ ಆಂಜೆಲೊರ್ ಘಟಕವು ಗಾರ್ಡಿಯನ್ ಏಂಜೆಲ್ ಧರ್ಮಕ್ಷೇತ್ರ, ನಾಗೋರಿ, ಮಂಗಳೂರು ಇದರ ಅಂತರ ಧರ್ಮೀಯ ಸೌಹಾರ್ದ ಆಯೋಗದ ಸಹಯೋಗದೊಂದಿಗೆ ಭಾನುವಾರ ಡಿಸೆಂಬರ್ 2023ರಂದು ಕಪಿತಾನಿಯೋ ಶಾಲಾ ಕ್ರೀಡಾಂಗಣದಲ್ಲಿ ಅಂತರ-ಧರ್ಮೀಯ ಸೌಹಾರ್ದ ಕ್ರೀಡಾಕೂಟವನ್ನು ಏರ್ಪಡಿಸಿತ್ತು.


ಸಿಟಿ ಮತ್ತು ಸಿಟಿ ಎಪಿಸ್ಕೊಪಲ್ ವಲಯದ ಪುರುಷರ 13 ವಾಲಿಬಾಲ್ ಮತ್ತು ಮಹಿಳೆಯರ 10 ಥ್ರೋಬಾಲ್ ತಂಡಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು. ಕ್ರೀಡಾಕೂಟದ ಅಂಗವಾಗಿ ಕ್ರೀಡಾಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಧರ್ಮಕ್ಷೇತ್ರದ ವ್ಯಕ್ತಿಗಳಾದ ಪ್ರದೀಪ್ ಡಿಸೋಜ ಹಾಗೂ ಮಿಸ್ಟರ್ ವರ್ಲ್ಡ್ ಖ್ಯಾತಿಯ ರೇಮಂಡ್ ಡಿ’ಸೋಜಾ ಅವರನ್ನು ಸನ್ಮಾನಿಸಲಾಯಿತು. ವಾಲಿಬಾಲ್ ಪಂದ್ಯದಲ್ಲಿ ಬೊಂದೆಲ್ ಎ ತಂಡ ಟ್ರೋಫಿ ಗೆದ್ದರೆ ಬೊಂದೆಲ್ ಬಿ ತಂಡ ಎರಡನೇ ಸ್ಥಾನವನ್ನು ಪಡೆಯಿತು. ಥ್ರೊಬಾಲ್ ಪಂದ್ಯದಲ್ಲಿ ಬೊಂದೆಲ್ ತಂಡ ಪ್ರಥಮ ಸ್ಥಾನವನ್ನು ಹಾಗೂ ವಾಮಂಜೂರು ತಂಡವು ದ್ವಿತೀಯ ಸ್ಥಾನವನ್ನು ಪಡೆಯಿತು.

ಇತ್ತೀಚಿನ ಸುದ್ದಿ

ಜಾಹೀರಾತು