11:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಂಚು ಗೆದ್ದ ಭಾರತ : ಹಾಕಿಯಲ್ಲಿ 41 ವರ್ಷದ ಒಲಿಂಪಿಕ್ ಪದಕದ ಬರ ನೀಗಿಸಿದ ಮನ್‌ಪ್ರೀತ್ ಸಿಂಗ್ ನೇತೃತ್ವದ ತಂಡ

05/08/2021, 09:38

reporterKarnataka.com

ಒಲಿಂಪಿಕ್ಸ್‌ ಹಾಕಿಯಲ್ಲಿ ಬರೋಬ್ಬರಿ 41 ವರ್ಷಗಳ ಬಳಿಕ ಭಾರತೀಯ ಪುರುಷರ ತಂಡ ಪದಕವನ್ನು ಪಡೆದುಕೊಂಡು ಹೊಸ ಇತಿಹಾಸ ರಚಿಸಿದೆ. ಮನ್‌ಪ್ರೀತ್ ಸಿಂಗ್ ನೇತೃತ್ವದ ಭಾರತ ಪುರುಷರ ಹಾಕಿ ತಂಡ ರೋಚಕತೆಯಿಂದ ಕೂಡಿದ ಕಂಚಿನ ಪದಕದ ಕಾದಾಟದಲ್ಲಿ ಬಲಿಷ್ಠ ಜರ್ಮನಿ ತಂಡವನ್ನು ಮಣಿಸುವ ಮೂಲಕ ಭಾರತ ಹಾಕಿ ತಂಡ ಕಂಚಿನ ಪದಕ ಜಯಿಸುವಲ್ಲಿ ಯಶಸ್ವಿಯಾಗಿದೆ.

ಮೊದಲ ಕ್ವಾರ್ಟರ್‌ನ ಎರಡನೇ ನಿಮಿಷದಲ್ಲಿ ಟೈಮೂರ್ ಗೋಲು ಬಾರಿಸುವ ಮೂಲಕ ಜರ್ಮನಿಗೆ 1-0 ಮುನ್ನಡೆ ಒದಗಿಸಿಕೊಟ್ಟರು. ಇದರೊಂದಿಗೆ ಮೊದಲ ಕ್ವಾರ್ಟರ್‌ನಲ್ಲಿ ಜರ್ಮನಿ 1-0 ಮುನ್ನಡೆ ಕಾಯ್ದುಕೊಂಡಿತು. ಇನ್ನು ಎರಡನೇ ಕ್ವಾರ್ಟರ್‌ನಲ್ಲಿ ಕಮ್‌ಬ್ಯಾಕ್‌ ಮಾಡುವಲ್ಲಿ ಭಾರತ ಯಶಸ್ವಿಯಾಯಿತು. ಎರಡನೇ ಕ್ವಾರ್ಟರ್‌ನಲ್ಲಿ ಭಾರತ ಮೂರು ಗೋಲು ಬಾರಿಸಿದರೆ, ಜರ್ಮನಿ ಎರಡು ಗೋಲು ಬಾರಿಸಿತು. ಇದರೊಂದಿಗೆ ಮೊದಲಾರ್ಧ ಮುಕ್ತಾಯದ ವೇಳೆಗೆ 3-3ರ ಸಮಬಲ ಸಾಧಿಸಿತು.

ಇನ್ನು ಮೂರನೇ ಕ್ವಾರ್ಟರ್‌ನಲ್ಲಿ ಮತ್ತಷ್ಟು ಆಕ್ರಮಣಕಾರಿ ಪ್ರದರ್ಶನ ತೋರಿದ ಮನ್‌ಪ್ರೀತ್‌ ಪಡೆ ಮತ್ತೆರಡು ಗೋಲು ಬಾರಿಸುವ ಮೂಲಕ ಭಾರತಕ್ಕೆ 5-3ರ ಮುನ್ನಡೆ ಒದಗಿಸಿಕೊಟ್ಟಿತು. ಇನ್ನು ಕೊನೆಯ ಕ್ವಾರ್ಟರ್‌ನಲ್ಲಿ ಜರ್ಮನಿ ಕೇವಲ ಒಂದು ಗೋಲು ಗಳಿಸಲಷ್ಟೇ ಶಕ್ತವಾಯಿತು.

ಭಾರತ ಹಾಕಿ ತಂಡವು 1980ರ ಬಳಿಕ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು. ಜರ್ಮನಿಗೆ ಬರೋಬ್ಬರಿ 13 ಪೆನಾಲ್ಟಿ ಕಾರ್ನರ್‌ ಗಳಿಸುವ ಅವಕಾಶವಿದ್ದರೂ ಕೇವಲ ಒಂದು ಗೋಲು ಗಳಿಸಲಷ್ಟೇ ಜರ್ಮನಿ ಶಕ್ತವಾಯಿತು. ಗೋಲ್ ಕೀಪರ್ ಶ್ರೀಜೆಶ್ ಕೂಡ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು