2:12 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಚಳ್ಳಕೆರೆ: ಹಸು ಕಳ್ಳತನ ಮಾಡಿಕೊಂಡು ಹೋಗುತ್ತಿದ್ದ ವಾಹನವನ್ನು ಬೆನ್ನಟ್ಟಿ ಜಾನುವಾರು ರಕ್ಷಿಸಿಕೊಂಡ ರೈತ ನಾಗರಾಜು

18/12/2023, 12:25

ಮುರುಡೇ ಗೌಡ ಚಳ್ಳಕೆರೆ ಚಿತ್ರದುರ್ಗ

info.reporterkarnataka@gmail.com

ಚಳ್ಳಕೆರೆ ತಾಲೂಕಿನ ಹೊಟ್ಟಪ್ಪನಹಳ್ಳಿಯ ನಂದಾಪುರ ನಗರದ ರೈತ ನಾಗರಾಜ್ ಅವರ ಹಸುವನ್ನು ಯಾರೂ ಕಳ್ಳರು ಅಶೋಕ್ ಲೇಲ್ಯಾಂಡ್ ವಾಹನದಲ್ಲಿ ಕದ್ದು ಪರಾರಿಯಾಗಲು ಯತ್ನಿಸಿದು, ನಾಗರಾಜ್ ಅವರ ಕುಟುಂಬದ ಸಮಯಪ್ರಜ್ಞೆಯಿಂದ ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನವನ್ನು ಹಿಂಬಾಲಿಸಿ ತಮ್ಮ ಹಸುವನ್ನು ರಕ್ಷಿಸಿ ಕೊಂಡಿದ್ದಾರೆ.
ಹಸುವನ್ನು ಕದ್ದು ಪರಾರಿಯಾಗುತ್ತಿದ್ದ ವಾಹನದ ಶಬ್ದವನ್ನು ಕೇಳಿದ ರೈತ ನಾಗರಾಜ್ ಮತ್ತು ಮಗ ಮಂಜುನಾಥ್ ಅಳಿಯ ಲೋಕೇಶ್ ಗಾಬರಿಯಿಂದ ಎಚ್ಚರಗೊಂಡು. ಲೋಕೇಶ್ ಅವರ ಗೆಳೆಯರ 2 ಕಾರಿನಲ್ಲಿ ಹಸುವನ್ನು ಕದ್ದು ಪರಾರಿ ಆಗುತ್ತಿದ್ದ, KA51-AA-6295 ವಾಹನವನ್ನು 15 ಕಿಲೋಮೀಟರ್ ಚೇಂಜ್ ಮಾಡಿದು, ಗೋಪನಹಳ್ಳಿಯ ಬಿಎಸ್ಎನ್ಎಲ್ ಆಫೀಸಿನ ಹತ್ತಿರ ಕಳ್ಳರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ. ಈ ಘಟನೆಯು ಶನಿವಾರ ತಡರಾತ್ರಿ ನಡೆದಿದೆ.


ಮಧ್ಯರಾತ್ರಿ 12:50 ರಲ್ಲಿ ವಾಹನದಲ್ಲಿ ಕಳ್ಳರನ್ನು ಹಿಡಿಯಲು ಕಿರುಚಿಕೊಂಡು ಬಂದ ಕಾರಿನವರ ಶಬ್ದ ಕೇಳಿ ಬಂದಂತ ಕೆಆರ್‌ಎಸ್ ಪಕ್ಷದ ಮಣಿಕಂಠ, ರೈತರು ಜೀವನಕ್ಕೆ ಹಸುಗಳನ್ನು ಸಾಕುತ್ತಿದ್ದಾರೆ. ಆದರೆ ಸರ್ಕಾರದ ಸಬ್ಸಿಡಿಯ ಮೂಲಕ ವಾಹನವನ್ನು ಪಡೆದು ದುರ್ಬಳಕೆ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರೇ ಸಾರಿಗೆ ಸಚಿವರೇ, ಇಂತಹ ಅಹಿತಕರ ಘಟನೆಗಳು ನಡೆಯದಂಗೆ ಸೂಕ್ತ ಕ್ರಮ ಕೈಗೊಳ್ಳಿ ರೈತರನ್ನು ರಕ್ಷಿಸಿ ಎಂದು ಹೇಳಿ.112 ಪೊಲೀಸರಿಗೆ ಮಾಹಿತಿ ನೀಡಿ ಹಸುವನ್ನು ಕದ್ದು ತಂದ ವಾಹನವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು