7:23 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿದ್ಯಾರ್ಥಿಗಳು ಜೀವನದಲ್ಲಿ ಆದರ್ಶಗಳನ್ನು ಪಾಲಿಸಿದಾಗ ಸಮಾಜದಲ್ಲಿ ಮುಂದೆ ಬರಲು ಸಾಧ್ಯ: ವಿನಯ್ ಕುಮಾರ್ ಹಿರೇಮಠ

07/08/2021, 09:23

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ವಿದ್ಯಾನಿಕೇತನ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಕಾಲೇಜು ಬ್ಯಾಗ್, ನೋಟ್ಬುಕ್, ಗ್ರಂಥಾಲಯ ಪುಸ್ತಕ, ಹಾಗೂ ಅಧ್ಯಯನ ಸಾಮಗ್ರಿಯನ್ನು ವಿತರಿಸಲಾಯಿತು. ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಾಚಾರ್ಯ ವಿನಯ್ ಕುಮಾರ್ ಹಿರೇಮಠ ಅವರು, ಸಮಾಜದಲ್ಲಿ ವಿದ್ಯಾರ್ಥಿಗಳು ಮುಂದೆ ಬರಬೇಕಾದರೆ ಜೀವನದಲ್ಲಿ ಗುರಿ ಇರಬೇಕು. ನಾವು ಬದುಕಬೇಕಾದರೆ ಸಮಾಜದಲ್ಲಿ ಹೇಗಿರಬೇಕು. ಹೀಗೆ ಬದುಕಬೇಕು. ಚೆನ್ನಾಗಿ ವಿದ್ಯಾಭ್ಯಾಸ ಮಾಡುವುದರಿಂದ ಸಮಾಜದಲ್ಲಿ ಉನ್ನತ ಹುದ್ದೆಯ ಪಡೆಯಬಹುದು. ನೀವು ಉನ್ನತ ಹುದ್ದೆ ಪಡೆದಾಗ ಹಡೆದ ತಂದೆ-ತಾಯಿಗಳಿಗೂ ಮತ್ತು ನಮ್ಮ ಕಾಲೇಜಿಗೂ ಕೀರ್ತಿ ಗೌರವ ಸಲ್ಲುತ್ತದೆ. ಆದ್ದರಿಂದ ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಚೆನ್ನಾಗಿ ಓದಿನ ಕಡೆ ಗಮನಕೊಟ್ಟು ಸಮಾಜದಲ್ಲಿ ಮುಂದೆ ಬರಬೇಕು. ಸಮಾಜದಲ್ಲಿ ಒಳ್ಳೆಯವರ ಮಾರ್ಗದರ್ಶನ ಅವರ ಆದರ್ಶಗಳನ್ನು ಪಾಲಿಸಿದಾಗ ಜೀವನದಲ್ಲಿ ಮುಂದೆ ಬರಲು ಸಾಧ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಸಂಸ್ಥೆಯ  ಮಂಡಳಿಯ

ಬಸವರಾಜ ತೊಂತನಾಳ, ನಾಗರಾಜ ಶೆಟ್ಟಿ , ವಿದ್ಯಾಮನೋಹರ, ವೀರೇಶ ಗೋನಾಳ, ಶ್ರೀಧರ ಗುಡಿ, ಕಾಲೇಜಿನ ಪ್ರಾಂಶುಪಾಲರಾದ ವಿನಯಕುಮಾರ ಹಿರೇಮಠ, ಅಮರೇಶ ನಾಯಕ ಯಲ್ಲಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು