3:17 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶಿಕ್ಷಣ ಕ್ಷೇತ್ರದಲ್ಲಿ ದ.ಕ. ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿ: 42ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟಿಸಿ ಸಚಿವ ಬಿ. ನಾಗೇಂದ್ರ

13/01/2024, 19:25

ಮಂಗಳೂರು(reporterkarnataka.com): ತುಳುನಾಡು ಮಂಗಳೂರುನಲ್ಲಿ ಕ್ರೀಡಾ ಸಾಧಕರ ಜೊತೆಗೆ ಶಿಕ್ಷಣ ಕ್ಷೇತ್ರದಲ್ಲಿ ಕೂಡ ಬಹಳಷ್ಟು ಸಾಧನೆ ಮಾಡಿದ ಸಾಧಕರು ಇದ್ದಾರೆ. ನಮ್ಮ ಉತ್ತರ ಕರ್ನಾಟಕಕ್ಕಿಂತಲೂ ಮಂಗಳೂರು ಭಾಗದ ಜನರು ಬಹಳ ಬುದ್ಧಿವಂತರು ಇರುವ ಕಾರಣ ಮಂಗಳೂರು ಜಿಲ್ಲೆಯನ್ನು ಬುದ್ದಿವಂತರ ನಾಡು ಬಹಳ ಅನ್ನುತ್ತಾರೆ ನಾನು ಯುವ ಕ್ರೀಡಾಪಟುಗಳನ್ನು ನೋಡಿದ್ದೇ ಆದರೆ ಇಂದು ವಿಶೇಷವಾಗಿ 30 ರಿಂದ 90 ವರ್ಷದವರೆಗಿನ ಕ್ರೀಡಾ ಸಾಧಕರನ್ನು ನೋಡಿ ಬಹಳ ಸಂತೋಷ ತಂದಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ. ನಾಗೇಂದ್ರ ಹೇಳಿದರು.


ಶನಿವಾರ ನಗರದ ಮಂಗಳ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಕರ್ನಾಟಕ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಶನ್ ಹಾಗೂ ದಕ್ಷಿಣ ಕನ್ನಡ ಮಾಸ್ಟರ್ಸ್ ಆಥ್ಲೆಟಿಕ್ ಅಸೋಶೇಷನ್ ವತಿಯಿಂದ ಆಯೋಜಿಸಿದ್ದ 42 ನೇ ರಾಜ್ಯಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ಉದ್ಘಾಟನೆ ಮಾಡಿ ಮಾತನಾಡಿದ 2 ದಿನಗಳ ಕಾಲ ರಾಜ್ಯದ 31 ಜಿಲ್ಲೆಗಳಿಂದ ಸಾವಿರಾರು ಕ್ರೀಡಾಪಟುಗಳು & ಕ್ರೀಡಾಭಿಮಾನಿಗಳು ಆಗಮಿಸಿರುವ ಈ ಕ್ರೀಡಾಕೂಟದಲ್ಲಿ 30ರಿಂದ 90 ವರ್ಷದ ವರೆಗಿನ ಮಹಿಳಾ ಮತ್ತು ಪುರುಷ ಅಥ್ಲೆಟ್ ಗಳು ಪಾಲ್ಗೊಂಡಿದ್ದು, ಮೊದಲ ದಿನದ ಕ್ರೀಡಾಕೂಟದಲ್ಲಿ ಮಹಿಳಾ ಮತ್ತು ಪುರುಷರ ವಿಭಾಗದಲ್ಲಿ 5000 ಮೀಟರ್ ವಾಕ್, ಮಹಿಳೆಯರ 3000 ಮೀಟರ್ ವಾಕ್, ಟ್ರಿಪಲ್ ಜಂಪ್, ಹೈ ಜಂಪ್, 1500 ಮೀಟರ್ ಓಟ, ಡಿಸ್ಯಸ್ ಎಸೆತ, 100 ಮೀಟರ್, ಓಟ, ಜಾವೆಲಿನ್ ಎಸೆತ, 200 ಮೀಟರ್ ಓಟ, 5000 ಮೀಟರ್ ಪುರುಷರ ಓಟ ಹಾಗೂ ಮಹಿಳೆಯರಿಗೆ 3000 ಮೀಟರ್ ಓಟದ ಕ್ರೀಡಾಕೂಟ ನಡೆಯುತ್ತಿದ್ದು ರಾಜ್ಯದಲ್ಲಿ ಇದೊಂದು ವಿಭಿನ್ನ ಕ್ರೀಡಾಕೂಟ ಆಗಿದೆ. ಹಿರಿಯ ಸಾಧಕರನ್ನು ಗೌರವಿಸುವ ಕಾರ್ಯಕ್ರಮ ಇದಾಗಿದೆ.
2ನೇ ದಿನದ ಕ್ರೀಡಾಕೂಟದಲ್ಲಿ ಮಹಿಳೆಯರ ಮತ್ತು ಪುರುಷರ ಓಟ, ಹ್ಯಾಮರ್ ಎಸೆತ, ಲಾಂಗ್ ಜಂಪ್, 800 ಮೀಟರ್ ಓಟ, ಶಾಟ್ ಪುಟ್, ಹೈ ಜಂಪ್, 400 ಮೀಟರ್ ಓಟ, 100 ಮೀಟರ್ ಮತ್ತು 80 ಮೀಟರ್ ಹರ್ಡಲ್ಸ್ ರಿಲೇ ನಡೆಯಲಿದ್ದು ಎಲ್ಲಾ ಕ್ರೀಡಾಪಟುಗಳು ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿ ವಿಜೇತರಾಗಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಮ್ಮ ರಾಜ್ಯದ ಕ್ರೀಡೆಗಳನ್ನು ಅಂತರ್ ರಾಷ್ಟ್ರೀಯ ಮಟ್ಟಕ್ಕೆ ಕೊಂಡೋಯ್ಯಲು ಉತ್ತಮ ತರಬೇತಿದಾದರನ್ನು ಮತ್ತು ತರಬೇತಿಗೆ ಬೇಕಾಗುವ ಧನಸಹಾಯ ಕೂಡ ಕ್ರೀಡಾಪಟುಗಳಿಗೆ ನೀಡುತ್ತಾ ಬರುತ್ತಿದೆ.
ಒಲಂಪಿಕ್ ಮತ್ತು ಪ್ಯಾರಾ ಒಲಂಪಿಕ್ ಕ್ರೀಡೆಗಳಲ್ಲಿ ಚಿನ್ನ, ಬೆಳ್ಳಿ, ಕಂಚು ಪದಕ ವಿಜೇತರಾದಲ್ಲಿ ಈ ಹಿಂದೆ ಪೊಲೀಸ್ ಮತ್ತು ಅರಣ್ಯ ಇಲಾಖೆಯಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗ ಪಡೆಯಲು 2% ಮೀಸಲಾತಿ ಕಲ್ಪಿಸಲಾಗಿತ್ತು, ಆದರೆ ನಮ್ಮ ರಾಜ್ಯದ ನುಡಿದಂತೆ ನಡೆದ ಮುಖ್ಯಮಂತ್ರಿಗಳು ಇಡೀ ದೇಶಕ್ಕೆ ಮಾದರಿ ರಾಜಕಾರಣಿ ಸಿದ್ದರಾಮಯ್ಯ ಹಾಗೂ ನಾವು ಕ್ರೀಡಾಪಟುಗಳ ಬಗ್ಗೆ ವಿಶೇಷ ಕಾಳಜಿ ಎಲ್ಲಾ ಇಲಾಖೆಗಳಲ್ಲಿ 2% ಮೀಸಲಾತಿ ನೀಡಿ ಅವರ ಜೀವನೋಪಾಯಕ್ಕಾಗಿ ಉದ್ಯೋಗ ಪಡೆಯಲು ಸಹಕಾರ ನೀಡಿದೆ.
ಈಗಾಗಲೇ ನಮ್ಮ ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಇರುವ ಸ್ಥಳೀಯ ಕ್ರೀಡೆಗಳನ್ನು ಗೌರವಿಸಿ ಒಂದು ಜಿಲ್ಲೆ – ಒಂದು ಕ್ರೀಡೆ ಎನ್ನುವ ಘೋಷ ವಾಕ್ಯದಲ್ಲಿ ಸ್ಥಳೀಯ ಕ್ರೀಡೆಗಳನ್ನು ಅಂತರ್ ರಾಷ್ಟ್ರೀಯ ಮಟ್ಟಕ್ಕೆ ಕೊಂಡೋಯ್ಯಲು ನಮ್ಮ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಉತ್ತಮ ಕೆಲಸಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು