3:20 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಶಿವಮೊಗ್ಗದಲ್ಲಿ ಕ್ರಿಕೆಟ್ ಹಬ್ಬ : ಅಂತರ ಜಿಲ್ಲಾಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ; ಜನವರಿ 26ರಿಂದ ಆರಂಭ

21/01/2024, 00:21

ಶಿವಮೊಗ್ಗ(reporterkarnataka.com): ಶಿವಮೊಗ್ಗ ನಗರ ಟೀಮ್ ಮಾಧ್ಯಮ ಆಶ್ರಯದಲ್ಲಿ ಜನವರಿ 26,27 ಮತ್ತು 28 ರಂದು ನಗರದ ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಕ್ರೀಡಾಂಗಣದಲ್ಲಿ ಅಂತರ ಜಿಲ್ಲಾ ಮಟ್ಟದ ಕ್ರಿಕೆಟ್ ( ರಾಜ್ಯದ ಯಾವುದೇ ತಂಡಕೂಡ ಭಾಗವಹಿಸಬಹುದು ) ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಈ ಪಂದ್ಯಾವಳಿಯಲ್ಲಿ ಕೆಲವು ಜಿಲ್ಲೆಯ ಶ್ರೇಷ್ಠ ಕ್ರಿಕೆಟ್ ತಂಡಗಳು ಮತ್ತು ಶ್ರೇಷ್ಠ ಆಟಗಾರರು ಭಾಗವಹಿಸಲಿದ್ದಾರೆ. ಈ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದಂತಹ ತಂಡಕ್ಕೆ 50.000 ಸಾವಿರ ನಗದು ಮತ್ತು ಅತ್ಯಾಕರ್ಷಕ ಟ್ರೋಪಿ,ಎರಡನೇ ಸ್ಥಾನವನ್ನು ಗಳಿಸಿದ ತಂಡಕ್ಕೆ 25.000 ಸಾವಿರ ನಗದು ಮತ್ತು ಅತ್ಯಾಕರ್ಷಕ ಟ್ರೋಫಿ ಹಾಗೂ ಸೆಮಿಫೈನಲ್ಸ್ ಹಂತದಲ್ಲಿ ಸೊತಂತಹ ಎರಡು ತಂಡಗಳಿಗೆ ತಲಾ 7,000 ಸಾವಿರ ನಗದು ಮತ್ತು ಟ್ರೋಫಿಯನ್ನು ನೀಡಲಾಗುತ್ತದೆ.ಪ್ರತಿಯೊಂದು ಪಂದ್ಯಕ್ಕೂ ಪಂದ್ಯದ ಪುರುಷೋತ್ತಮ ಪ್ರಶಸ್ತಿಯನ್ನು ನೀಡಲಾಗುವುದು. ಇನ್ನುಳಿದಂತೆ ಈ ಪಂದ್ಯಾವಳಿಯಲ್ಲಿ ಸರಣಿಯ ಶ್ರೇಷ್ಠ ಆಟಗಾರನಿಗೆ 3000 ಸಾವಿರ ನಗದು ಮತ್ತು ಆಕರ್ಷಕ ಟ್ರೋಫಿಯನ್ನು ನೀಡಲಾಗುವುದು. ಶ್ರೇಷ್ಠ ಬ್ಯಾಟ್ಸ್‌ಮನ್, ಶ್ರೇಷ್ಠ ಬೌಲಿಂಗ್ ಮತ್ತು ಶ್ರೇಷ್ಠ ಕೀಪರ್ ಹಾಗೂ ಉತ್ತಮ ಫೀಲ್ಡರ್ ಪ್ರಶಸ್ತಿಯ ಜೊತೆಗೆ 2000 ಸಾವಿರ ರೂಪಾಯಿ ನಗದಿನ ಜೋತೆಗೆ ಟ್ರೋಫಿಯನ್ನು ನೀಡಲಾಗುವುದು,
ಈ ಪಂದ್ಯಾವಳಿಯಲ್ಲಿ ಮೊದಲು ಹೆಸರು ನೊಂದಯಿಸಿಕೊಳ್ಳುವ ತಂಡಕ್ಕೆ ಮೊದಲ ಆದ್ಯತೆ. ಇನ್ನೂ ಈ ಟೂರ್ನಿಯಲ್ಲಿ ಭಾಗವಹಿಸುವ ಪ್ರತಿತಂಡಕ್ಕೂ 5,000 ಸಾವಿರ ರೂಪಾಯಿ ಪ್ರವೇಶ ಶುಲ್ಕವಿರುತ್ತದೆ. ಯಾವುದೇ ತಂಡಕ್ಕೂ ಊಟ ವಸತಿ ಸೌಕರ್ಯ ಇರುವುದಿಲ್ಲ. ಭಾಗವಹಿಸುವ ತಂಡಗಳು ನಿಗದಿತ ಸಮಯಕ್ಕಿಂತ ಹದಿನೈದು ನಿಮಿಷ ಮುಂಚಿತವಾಗಿ ಮೈದಾನದಲ್ಲಿ ಇರತಕ್ಕದ್ದು. ನಿಗದಿತ ಸಮಯಕ್ಕಿಂತ ತಡವಾಗಿ ಬಂದಂತಹ ತಂಡವನ್ನು ಆಡಿಸಲಾಗುವುದಿಲ್ಲ. ಸರಿಯಾದ ಸಮಯಕ್ಕೆ ಬಂದು ನೊಂದಾಯಿಸಿಕೊಂಡ ತಂಡಕ್ಕೆ ವಾಕ್ ಓವರ್ ನೀಡಲಾಗುವುದು. ಉಳಿದಂತೆ ಪ್ರತಿಯೊಂದು ಪಂದ್ಯದಲ್ಲಿ ಪ್ರತಿ ತಂಡಕ್ಕೆ ಆರು ಓವರ್ ಸೀಮಿತವಾಗಿರುತ್ತದೆ, ಅಂಪೈರ್ ತೀರ್ಮಾನವೆ ಅಂತಿಮವಾಗಿರುತ್ತದೆ.
ಈ ಟೂರ್ನಮೆಂಟ್ ಈ ಪಂದ್ಯಾವಳಿಯಲ್ಲಿ ಶ್ರೇಷ್ಠ ಮಟ್ಟದ ತೀರ್ಪುಗಾರರು ಮತ್ತು ವೀಕ್ಷಕ ವಿವರಣೆ ಗಾರರು ಕಾರ್ಯನಿರ್ವಹಿಸಲಿದ್ದಾರೆ, ಈ ಪಂದ್ಯಾವಳಿಯನ್ನು ಅದ್ದೂರಿಯಾಗಿ ನೆಡೆಸಲು ಟೀಮ್ ಮಾಧ್ಯಮದ ಸದಸ್ಯರು ರೂಪುರೇಷೆಗಳನ್ನು ಸಿದ್ಧಪಡಿಸಿಕೊಂಡಿದ್ದು. ಈ ಒಂದು ಪಂದ್ಯಾವಳಿಯು ಬರಲಿರುವ ಏಪ್ರಿಲ್ ತಿಂಗಳಲ್ಲಿ ಅದ್ದೂರಿಯಾಗಿ ‌ನೆಡೆಸಲಿರುವ ರಾಷ್ಟ್ರಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಮೆಂಟಿನ ಪ್ರಾಯೋಗಿಕ ಪಂದ್ಯಾವಳಿ ಆಗಿರುತ್ತದೆ.ಈ ಟೂರ್ನಿಯಲ್ಲಿ ಅಂತಿಮ ಘಟ್ಟ ತಲುಪಿದಂತಹ ನಾಲ್ಕು ತಂಡಗಳಿಗೆ ರಾಷ್ಟ್ರಮಟ್ಟದ ಟೂರ್ನಿಗೆ ಆಡುವ ಅವಕಾಶ ಇರುತ್ತದೆ ( ಪ್ರವೇಶ ಶುಲ್ಕವಿರಿತ್ತದೆ ) ಮೂರು ದಿನಗಳ ಕಾಲ ಅದ್ದೂರಿಯಾಗಿ ನಡೆಯುವ ಈ ಅಂತರ ಜಿಲ್ಲಾ ಮಟ್ಟದ ಪಂದ್ಯಾವಳಿಯ ಕ್ರೀಡಾಂಗಣದ ಬೌಂಡರಿಯ ಸೀಮಾ ರೇಖೆಯ ಸುತ್ತ ಜಾಹೀರಾತು ಬ್ಯಾನರ್ ಗಳನ್ನು ಅಳವಡಿಸಲಾಗುದು ಒಂದು ಬ್ಯಾನರ್ ಅಳವಡಿಸಲು 2000 ಸಾವಿರ ರೂಪಾಯಿ ಶುಲ್ಕವಿರುತ್ತದೆ ಬ್ಯಾನರ್ ಗಳನ್ನು ಸಂಭಂದಪಟ್ಟವರೆ ನೀಡಬೇಕಾಗುತ್ತದೆ.
ಟೆನ್ನಿಸ್ ಬಾಲ್ ಕ್ರಿಕೆಟ್ ಪ್ರೇಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಒಂದು ಪಂದ್ಯಾವಳಿಯನ್ನು ಯಶಸ್ವಿಯಾಗಿ ನೆರವೇರಿಸಲು ಸಹಕರಿಸ ಬೇಕಾಗಿ ತಮ್ಮಲ್ಲಿ ಟೀಮ್ ಮಾಧ್ಯಮದ ಸರ್ವ ಸದಸ್ಯರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿ ಮತ್ತು ತಂಡದ ನೊಂದಣಿಗಾಗಿ ಈ ಕೆಳಗಿನ ವಿಳಾಸ ಮತ್ತು ಪೋನ್ ನಂಬರ್ ಗಳಿಗೆ ಕರೆಮಾಡಿ.

*ಸುಧೀರ್ ಕುಮಾರ್ ಎಸ್ ವೈ, – 94831659999,*

*ಚಂದ್ರಶೇಖರ್ ಜಿ – 9845484824* ,

*ಶಿ ಜು‌ ಪಾಶ – 8050112067* ,

*ಎಸ್ ಕೆ ಗಜೇಂದ್ರ ಸ್ವಾಮಿ – 9448256183*

*”ಜಿ ಪದ್ಮನಾಭ್ -9448628131*

ಇತ್ತೀಚಿನ ಸುದ್ದಿ

ಜಾಹೀರಾತು