11:50 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸರಕಾರದ ಆದೇಶಗಳಿಗೇ  ಕಿಮ್ಮತ್ತು ನೀಡದ ಈಚನಾಳ ಗ್ರಾಮ ಪಂಚಾಯಿತಿ ಪಿಡಿಒ…!!! 

18/05/2021, 15:25

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ದಿನದಿಂದ ದಿನಕ್ಕೆ ಕೊರೋನಾ  ಸೋಂಕಿತರ ಸಂಖ್ಯೆ ಗ್ರಾಮಿಣ ಪ್ರದೇಶಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿರುವುದರಿಂದ ಗ್ರಾಮಿಣ ಭಾಗದ ಜನರಲ್ಲಿ ಆತಂಕ ಹೆಚ್ಚಾಗತೊಡಗಿದೆ. ಈ ಕುರಿತು ಸರ್ಕಾರ ಗ್ರಾಮ ಪಂಚಾಯತ್ ಇಲಾಖೆ ಗಳಿಗೇ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಆದೇಶ ಹೊರಡಿಸಿದೆ ನಿಜ…..!!! ಆದರೆ ಆ ಆದೇಶ ಪ್ರತಿಗಳಿ ಗೇ  ಬೆಲೆ ಯೇ ಇಲ್ಲವೆಂಬಂತೆ ಕಸದ ಬುಟ್ಟಿ ಸೇರುತ್ತಿವಿಯಾ??? ಎಂಬ ಅಭಿಪ್ರಾಯ ಸಾರ್ವಜನಿಕ ವಲಯಗಳಲ್ಲಿ ದಟ್ಟವಾಗಿ ಹಬ್ಬುತ್ತೀವೆ. ಏಕೆಂದರೆ ಪ್ರಸ್ತುತ ಈಚನಾಳ ಗ್ರಾಮ ಪಂಚಾಯತ್ ಪಿಡಿಒ ಸರ್ಕಾರ ದ ಆದೇಶ ಗಳನ್ನ ಉಲ್ಲಂಘಿಸುವ ಮೂಲಕ ಬೆಜವ್ದಾರಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. 

ಕೊವಿಡ್ – 19 ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇಲ್ಲಿಯವರೆಗೆ ಒಂದೇ ಒಂದು ಜಾಗೃತಿ ಅಭಿಯಾನ ಮಾಡಿಲ್ಲ, ಗ್ರಾಮ ಗಳಲ್ಲಿ ಸ್ಯಾನಿಟೈಜರ್ ಕೂಡ ಮಾಡಿಸುತ್ತಿಲ್ಲ, ಅಲ್ಲದೇ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಕೂಡ ಪಿಡಿಒ ಹಾಜರಾಗುತ್ತಿಲ್ಲ. ಅದಲ್ಲದೇ ಗ್ರಾಮಿಣ ಭಾಗದ ಜನರಿಗೆ ಆಸರೆ ಯಾದ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲು ಕೂಡ ಅಸಹಕಾರ ತೋರಿಸುತ್ತಿದ್ದಾರೆ. ಸರ್ಕಾರ ನರೇಗಾ ಯೋಜನೆಯಡಿ ಕೆಲಸದ ಬೇಡಿಕೆ ಅರ್ಜಿ ಸಲ್ಲಿಸಲು ಆದೇಶ ನೀಡಿದರೂ ಕೂಡ ಅರ್ಜಿ ಸ್ವಿಕರಿಸುತ್ತಿಲ್ಲ, ಒಟ್ಟಾರೆ ಸರ್ಕಾರ ದ ಆದೇಶ ಕ್ಕೂ ನನಗೇ ಸಂಬಂಧವಿಲ್ಲದಂತೆ ಕಾರ್ಮಿಕರ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿರುವ ಪಿಡಿಒ ವಿರುದ್ಧ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಜರುಗಿಸಲು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ನರೇಗಾ ಯೋಜನೆಯಡಿ ಕೆಲಸ ದ ಬೇಡಿಕೆ ಸ್ವಿಕರಿಸುವಂತೆ ಸರ್ಕಾರ ದ ಆದೇಶ ಹೊರಡಿಸಿದರೂ ಕೂಡ ಪಿಡಿಒ ಅರ್ಜಿ ಸ್ವಿಕರಿಸುತ್ತಿಲ್ಲ,ಈ ಬಗ್ಗೆ ಸಹಾಯಕ ನಿರ್ದೇಶಕ ರ ಗಮನಕ್ಕೆ ತಂದರೂ ಕೂಡ ಪಿಡಿಒ ಅರ್ಜಿ ಸ್ವಿಕರಿಸಲಿಲ್ಲ, ತದನಂತರ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಾಟ್ಸಪ್ ಮೂಲಕ ಸಮಸ್ಯೆ ಹೇಳಿಕೊಂಡಾಗ ಸಮಸ್ಯೆ ಗೇ  ಸ್ಪಂದಿಸಿದ ಇಓ  ಅಧಿಕಾರಿಗಳು, ಪಿಡಿಒ ಗೇ ಅರ್ಜಿ ಸ್ವಿಕರಿಸುವಂತೆ ಹೇಳಿದಾಗ ಮಾತ್ರ, ಪಿಡಿಒ ಅರ್ಜಿ ಸ್ವಿಕರಿಸಿದರೂ ಕೂಡ ಸ್ವಿಕೃತಿ ನೀಡದೇ ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. 

ಶರಣ ಬಸವ, ಈಚನಾಳ ಕರುನಾಡ ವಿಜಯ ಸೇನೆ ತಾಲೂಕು ವಕ್ತಾರ

ಇತ್ತೀಚಿನ ಸುದ್ದಿ

ಜಾಹೀರಾತು