11:45 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೊಂದೆಲ್ ಚರ್ಚ್ ಶಾಲಾ ವಠಾರದಲ್ಲಿ 16ನೇ ಸ್ಟ್ಯಾನ್ ನೈಟ್ ಸಂಪನ್ನ; ಸಂಗೀತ ಪ್ರೇಮಿಗಳಿಗೆ ರಸದೌತಣ

05/02/2024, 20:00

ಮಂಗಳೂರು(reporterkarnataka.com): ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ಆಲ್ಫ್ರೆಡ್ ಬೆನ್ನಿಸ್ ಕ್ರಿಯೇಶನ್ಸ್ ಮಂಗಳೂರು ಮತ್ತು ಸಂತ ಲಾರೆನ್ಸರ ದೇವಾಲಯ ಮತ್ತು ಪುಣ್ಯಕ್ಷೇತ್ರ ಪ್ರಸ್ತುತಪಡಿಸಿದ 16ನೇ ಸ್ಟ್ಯಾನ್ ನೈಟ್ ಕಾರ್ಯಕ್ರಮ ಭಾನುವಾರ ನಗರದ ಬೊಂದೆಲ್ ಶಾಲಾ ವಠಾರದಲ್ಲಿ ನಡೆಯಿತು.
ವೇದಿಕೆಯಲ್ಲಿ ಗಣ್ಯ ವ್ಯಕ್ತಿಗಳಾದ ವ| ಫಾ ಆಂಡ್ರ್ಯೂ ಲಿಯೋ ಡಿಸೋಜ, ರಾಯ್ ಕಾಸ್ಟೆಲಿನೊ” ಲುವಿ ಪಿಂಟೊ, ಜೋಸೆಫ್ ಮಾಥಾಯಸ್, ಆಲ್ವಿನ್ ರೊಡ್ರಿಗ್ಸ್” ಸ್ಟ್ಯಾನಿ ಮೆಂಡೊನ್ಸಾ, ಆಲ್ಫ್ರೆಡ್ ಬೆನ್ನಿಸ್ , ರವಿ ಪಿಂಟೊ, ಸಂತೋಷ್ ಸಿಕ್ವೆರಾ, ಆಂಡ್ರಿಯಾ ಸಿಕ್ವೆರಾ, ಡಾ ಪ್ರೀತಿ ಡಿಸೋಜ, ಜೊನ್ ಡಿ ಸಿಲ್ವಾ , “ಫೆಲಿಕ್ಸ್” ಮೊರಾಸ್ ಉಪಸ್ಥಿತರಿದ್ದರು.
ಬೋಂದೆಲ್ ದೇವಾಲಯದ ನವೀಕೃತ ಯೋಜನೆಗೆ ಸಹಾಯಾರ್ಥವಾಗಿ ರೂ ಐದು ಲಕ್ಷ ಚೆಕ್ , ಆಲ್ಫ್ರೆಡ್ ಬೆನ್ನಿಸ್ ಹಾಗೂ ಸ್ಟ್ಯಾನಿ ಮೆಂಡೊನ್ಸಾ ವ| ಫಾ ಆಂಡ್ರ್ಯೂ ಲಿಯೋ ಡಿಸೋಜರವರಿಗೆ ಹಸ್ತಾಂತರ ಮಾಡಿದರು.
ಸಂಜೆ ಗಂಟೆ. 6.೦೦ರಿಂದ ಪ್ರಾರಂಭವಾದ ಕಾರ್ಯಕ್ರಮದಲ್ಲಿ ಮಂಗಳೂರಿನ ಹೆಸರಾಂತ ಗಾಯಕ-ಗಾಯಕಿರಿಂದ ಸಂಗೀತ ರಸಮಂಜರಿ, ಜೊಸ್ವಿನ್ ಪಪ್ವಾನರಿಂದ ಸಂಗೀತ , ಮೆಮರಿ ಮಂಗಳೂರು ಕಲಾವಿದರಿಂದ ಹಾಸ್ಯ ಕಾರ್ಯಕ್ರಮ, ಅರ್ಬನ್ ಗ್ರೂವ್ ಅವರಿಂದ ನೃತ್ಯ . ಒಂದೇ ವೇದಿಕೆಯಲ್ಲಿ ಪ್ರೇಕ್ಷಕರಿಗೆ ವಿವಿಧ ಮನೋರಂಜನೆಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು . ಈ ಕಾರ್ಯಕ್ರಮವನ್ನು ಕೊಂಕಣಿ ಭಾಷಿಕರ ಹೆಸರಾಂತ ಕಾರ್ಯನಿರ್ವಾಹಕ ಲೆಸ್ಲಿ ರೇಗೊ ಕಾರ್ಯಕ್ರಮ ನಿರೂಪಿಸಿದರು. ಈ ಕಾರ್ಯಕ್ರಮವು ಉಚಿತ ಪ್ರವೇಶವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು