10:09 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಭಂಡಾರಿಬೆಟ್ಟು: 18ರಂದು ಬಂಟ್ವಾಳ ಭಂಡಾರಿ ಸಮಾಜದ ಕ್ರೀಡೋತ್ಸವ

17/02/2024, 03:44

ಬಂಟ್ವಾಳ(reporterkarnataka.com): ಭಂಡಾರಿ ಸಮಾಜ ಸಂಘ ಭಂಡಾರಿ ಮತ್ತು ಯುವ ವೇದಿಕೆ ಹಾಗೂ ಭಂಡಾರಿ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಭಂಡಾರಿ ಸಮಾಜ ಬಾಂಧವರ ಕ್ರೀಡೋತ್ಸವವು 18 ಭಾನುವಾರದಂದು ಬಂಟ್ವಾಳ ಭಂಡಾರಿಬೆಟ್ಟು ಎಸ್. ವಿ. ಎಸ್. ಶಾಲಾ ಮೈದಾನದಲ್ಲಿ ಸಂಘದ ಅಧ್ಯಕ್ಷ ಗೋಪಾಲ ಭಂಡಾರಿ ಪುಣ್ಕೇದಡಿ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪತ್ರಕರ್ತ ಕಿರಣ್ ಸರಪಾಡಿ ಕ್ರೀಡೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸಂಘದ ಗೌರವ ಅಧ್ಯಕ್ಷ ದಿವಾಕರ ಶಂಭೂರು, ಅಮಾಟಡಿ ಗ್ರಾಮ ಪಂಚಾಯತ್ ಸದಸ್ಯ ಬಿ.ಬಾಬು ಭಂಡಾರಿ,ಬಿ.ಎಸ್.ಎನ್.ಎಲ್. ನ ನಿವೃತ್ತ ಅಧೀಕ್ಷಕಿ ಯಶೋಧಾ ಎನ್. ಭಂಡಾರಿ, ಬಾಳ್ತಿಲ ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಯಶ್ವಿತಾ ಮಂಜುನಾಥ್, ಬಂಟ್ವಾಳ ಪುರಸಭೆ ಸದ್ಯಸ್ಯೆ ಶಶಿಕಲಾ ಪ್ರಭಾಕರ್ ಭಂಡಾರಿ,ಯುವ ವೇದಿಕೆ ಅಧ್ಯಕ್ಷ ರಮೇಶ್ ಭಂಡಾರಿ ಮೈರನಪಾದೆ,ಭಂಡಾರಿ ಮಹಿಳಾ ವೇದಿಕೆ ಅಧ್ಯಕ್ಷೆ ಜಯಶ್ರೀ ಸುರೇಶ್ ತುಂಬೆ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಂದು ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಉಪನ್ಯಾಸಕ ಸುರೇಶ್ ನಂದೊಟ್ಟು, ಪ್ರವೀಣ್ ಕುಮಾರ್ ಪಡೀಲ್ ಮಂಗಳೂರು ಪ್ರತಿಮಾ ಮನೋಹರ್ ಹಿರ್ಣಿ ಸಿವಿಲ್ ಇಂಜಿನಿಯರ್ ರಾಜೇಶ್ ಬಂಟ್ವಾಳ ಆಗಮಿಸಲಿದ್ದಾರೆ ಎಂಬುದಾಗಿ ಸಂಘದ ಕಾರ್ಯದರ್ಶಿ ಜಯರಾಮ್ ಭಂಡಾರಿ ನಿತ್ಯಾನಂದ ನಗರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು