11:45 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೋಲಾರದಲ್ಲಿ ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನ: ಅನುದಾನ ನೀಡಲು ಕೇಂದ್ರ ಸಚಿವರಿಗೆ ವೈಎಎನ್ ಮನವಿ

11/08/2021, 08:24

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಅಂತರ್ಜಲ1200 ಅಡಿಗಳಿಗೆ ಹೋಗಿ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಕೆಸಿ ವ್ಯಾಲಿ 2ನೇ ಹಂತದ ಯೋಜನೆ ಅನುಷ್ಠಾನಕ್ಕೆ ತಗಲುವ 500 ಕೋಟಿ ರೂ ಅನುದಾನ ಒದಗಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೆಖಾವತ್ ಅವರಿಗೆ ಸಚಿವ ಮಾಧುಸ್ವಾಮಿ ಹಾಗೂ ವಿಧಾನಪರಿಷತ್ ಶಾಸಕ ಡಾ.ವೈ.ಎ.ನಾರಾಯಣಸ್ವಾಮಿ ಮನವಿ ಮಾಡಿದ್ದಾರೆ.

ದೆಹಲಿಯಲ್ಲಿ ಸಚಿವ ಮಾಧುಸ್ವಾಮಿ ಅವರೊಂದಿಗೆ ನಿಯೋಗದಲ್ಲಿ ತೆರಳಿದ್ದ ವೈಎಎನ್ ಅವರು , ಕೇಂದ್ರ ಸಚಿವರಿಗೆ ಮನವಿ ಮಾಡಿ , ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ 1200 ಅಡಿಗಳಿಗೆ ದಾಟಿದೆ , ಕೊಳವೆಬಾವಿಗಳಲ್ಲಿ ಸಿಗುವ ನೀರು ಪೈರೈಡ್ ಮಿಶ್ರಿತವಾಗಿದ್ದು , ಜನರ ಬದುಕು ದುಸ್ತರವಾಗಿದೆ ಎಂದು ತಿಳಿಸಿದರು. 

ಈಗಾಗಲೇ ಬೆಂಗಳೂರು ನಗರದ ತ್ಯಾಜ್ಯ ನೀರು ಕೆಸಿ ವ್ಯಾಲಿ ಮೊದಲನೇ ಹಂತದ ಯೋಜನೆ ಮೂಲಕ ಕೋಲಾರ ಜಿಲ್ಲೆಯ ಹಲವಾರು ಕೆರೆಗಳಿಗೆ ತುಂಬಿಸಲಾಗಿದ್ದು , ಇದರಿಂದ ಕೆರೆಗಳಿಗೆ ನೀರು ತುಂಬಿದ ಜಾಗದಲ್ಲಿ ರೈತರ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗಿದೆ ಎಂದು ಮನವರಿಕೆ ಮಾಡಿಕೊಟ್ಟರು. ಕೆಸಿ ವ್ಯಾಲಿ ಯೋಜನೆಯ ಮೂಲಕ ಜಿಲ್ಲೆಯ ಎಲ್ಲ ಕೆರೆಗಳಿಗೂ ನೀರು ಹರಿಸುವುದರಿಂದ ಅಂತರ್ಜಲ ವೃದ್ಧಿಗೆ ಸಹಕಾರಿಯಾಗಲಿದ್ದು , ಕೃಷಿಯನ್ನೇ ನಂಬಿದ ಜನರ ಬದುಕು ಹಸನಾಗಲಿದೆ ಎಂದು ತಿಳಿಸಿದರು . 

ಕೊಳಚೆ ನೀರನ್ನು ಸಂಸ್ಕರಿಸಿ ಕೋಲಾರಕ್ಕೆ ಹರಿಸಲಾಗುತ್ತಿದ್ದು , 2ನೇ ಹಂತದ ಯೋಜನೆ ಆನು ನಿನಗಂಡರೆ ಮತ್ತಷ್ಟು ಕರಗಳಿಗೆ ನೀರು ಹರಿಸುವುದರಿಂದ ಜಳ ಹಸಿರಾಗಲಿದೆ ಎಂದ ಅವರು , ಈಗಾಗಲೇ ಈ ಸಂಬಂಧ ಯೋಜನೆ ತಯಾರಾಗಿದ್ದು , ಇದಕ್ಕೆ ಅಗತ್ಯ ಅನುದಾನ ಒದಗಿಸುವಂತೆ ಕೋರಿದರು . ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಗಜೇಂದ್ರಸಿಂಗ್ ಷೇಖಾವತ್ , ಅನುದಾನ ಒದಗಿಸುವ ಭರವಸೆ ನೀಡಿದರು . ಈ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ , ಶೋಭಾ ಕರಂದ್ಲಾಜೆ , ಎ.ನಾರಾಯಣಸ್ವಾಮಿ. ಭಗವಂತ್ ಕೂಬಾ ಉಪಸ್ಥಿತರಿದ್ದರು . 

ಇತ್ತೀಚಿನ ಸುದ್ದಿ

ಜಾಹೀರಾತು