7:25 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡು: ಎಸ್ಸೆಸ್ಸೆಲ್ಸಿ ಮಕ್ಕಳಿಗಾಗಿ ಫೇರ್ ವೆಲ್ ಕಾರ್ಯಕ್ರಮ; ನುರಿತ ವಿಷಯ ತಜ್ಞ ಶಿಕ್ಷಕರಿಂದ ಧೈರ್ಯ ತುಂಬುವ ಕೆಲಸ

20/02/2024, 19:16

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡಿನ ಪ್ರತಿಷ್ಠಿತ ವಿದ್ಯಾಸಂಸ್ಥೆಗಳಲ್ಲೊಂದಾದ ಶ್ರೀ ನೀಲಕಂಠೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಮಕ್ಕಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅರುಣೇಶ್ ಹಾಗೂ ಶಿಕ್ಷಣ ಸಂಯೋಜಕ ರಮೇಶ್ ಸೇರಿದಂತೆ ಮತ್ತಿತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಶಿಕ್ಷಣ ಸಂಯೋಜಕರಾದ ರಮೇಶ್ ಮಾತನಾಡಿ, ಬುದ್ಧಿವಂತಿಕೆಯಿಂದ ಏನು ಪ್ರಯೋಜನವಿಲ್ಲ. ಶಿಕ್ಷಕರ ಬದ್ಧತೆ ಹಾಗೂ ವಿದ್ಯಾರ್ಥಿಗಳ ಪರಿಶ್ರಮದಿಂದ ಉತ್ತಮ ಫಲಿತಾಂಶ ಪಡೆಯಲು ಸಾಧ್ಯ. ಹಾಗಾಗಿ ಉಳಿದ ಕೆಲವೇ ದಿನಗಳಲ್ಲಿ ಬರುವ ಪರೀಕ್ಷೆಯಲ್ಲಿ ತಮ್ಮ ಬುದ್ಧಿವಂತಿಕೆ ಹಾಗೂ ಆಟೊಗಳನ್ನು ಬದಿಗಿಟ್ಟು ಪರಿಶ್ರಮದ ಕಡೆಗೆ ಗಮನ ಕೊಡಿ ಎಂದು ಕಿವಿಮಾತು ಹೇಳಿದರು.


ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಕುಮಾರ್ ಮಾತನಾಡಿ, ಕೆಲವರ ಪರಿಶ್ರಮದಿಂದಾಗೀ 34 ವರ್ಷಗಳಿಂದ ಈ ಶಾಲೆ ಉತ್ತಮವಾಗಿ ಬೆಳೆದು ಬಂದಿದೆ. ಅದರಲ್ಲೂ ಒಂದು ಶಾಲೆ ಬೆಳೆಯಬೇಕಾದರೆ ಅದರಲ್ಲಿ ಶಿಕ್ಷಕರ ಪಾತ್ರ ಬಹಳ ಮುಖ್ಯ ಎಂದರು.
ಕಳೆದ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಮ್ಮ ಶಾಲೆಯು ಶೇ. 98 ಫಲಿತಾಂಶ ಪಡೆದಿತ್ತು. ಈ ಸಾಲಿನಲ್ಲಿ ನಮ್ಮ ಶಿಕ್ಷಕರ ಪರಿಶ್ರಮದ ಜೊತೆಗೆ ಶಿಕ್ಷಣ ಸಂಯೋಜಕರು ಮತ್ತು ವಿಷಯವಾರು ತಜ್ಞರ ಸಲಹೆ ಯೊಂದಿಗೆ ಶೇಕಡ ನೂರಕ್ಕೆ ನೂರರಷ್ಟು ಫಲಿತಾಂಶ ತಂದೇ ತರುತ್ತೇವೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಇದೇ ಸಂದರ್ಭ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಪೂರಕವಾಗಿ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಕರೆಸಿ ಅವರಿಂದ ಮಕ್ಕಳಿಗೆ ಪರೀಕ್ಷೆಯ ಬಗ್ಗೆ ಮಾಹಿತಿ ಹಾಗೂ ಧೈರ್ಯ ತುಂಬುವಂತಹ ಕೆಲಸ ಮಾಡಲಾಯಿತು ಹಾಗೂ ಎಲ್ಲಾ ವಿಷಯವಾರು ತಜ್ಞ ಶಿಕ್ಷಕರನ್ನು ಶಾಲಾ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ವಿದ್ಯಾರ್ಥಿಗಳು ನಡೆಸಿಕೊಟ್ಟ ಫ್ಯಾಷನ್ ಶೋ ಮತ್ತು ನೃತ್ಯ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು. ಫ್ಯಾಶನ್ ಶೋನಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಈ ಸಂದರ್ಭ ಬಹುಮಾನ ವಿತರಣೆ ಮಾಡಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು