11:44 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಬೆಂಗಳೂರಿನ‌ ಯಾತ್ರಾರ್ಥಿ ಧರ್ಮಸ್ಥಳದಲ್ಲಿ ಹೃದಯಾಘಾತದಿಂದ ಸಾವು: 12 ಜನರ ಜತೆ ಬಂದ ಭಕ್ತ

02/03/2024, 17:11

ಸಂತೋಷ್ ಅತ್ತಿಗೆ ಚಿಕ್ಕಮಗಳೂರು

info.reporterkarnataka@gmail.com

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದ ಯಾತ್ರಾರ್ಥಿ ಶೌಚಾಲಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸರ್ಕಾರಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತನನ್ನ ಬೆಂಗಳೂರಿನ ಕಲಾಸಿಪಾಳ್ಯ ನಿವಾಸಿಯಾದ ವರ್ಷದ ಮಧುಸೂದನ್ (52) ಎಂದು ಗುರುತಿಸಲಾಗಿದೆ. ಮೃತ ಮಧುಸೂದನ್ ತನ್ನ 12 ಜನ ಸ್ನೇಹಿತರೊಂದಿಗೆ ಟಿಟಿ ವಾಹನ ಮಾಡಿಕೊಂಡು ಧರ್ಮಸ್ಥಳಕ್ಕೆ ಯಾತ್ರೆ ಹೊರಟಿದ್ದರು. ಟಿಟಿ ವಾಹನ ಕೊಟ್ಟಿಗೆಹಾರಕ್ಕೆ ಬರುತ್ತಿದ್ದಂತೆ ವಾಹನವನ್ನ ಶೌಚಾಲಯಕ್ಕೆ ನಿಲ್ಲಿಸಿದ್ದರು. ಈ ವೇಳೆ ಶೌಚಾಲಯಕ್ಕೆ ಹೋಗಿದ್ದ ಮಧುಸೂದನ್ ಗೆ ಶೌಚಾಲಯದಲ್ಲಿ ಹೃದಯಾಘಾತದಿಂದ ಬಳಲಿ ಬಿದ್ದಿದ್ದರು. ಜೊತೆಗಿದ್ದ ಸ್ನೇಹಿತರು ಹಾಗೂ ಸ್ಥಳೀಯರು ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಕೊಟ್ಟಿಗೆಹಾರದ ಸಮಾಜ ಸೇವಕ ಆರಿಫ್ ಕೂಡಲೇ ಆಂಬುಲೆನ್ಸ್ ತಂದು ಬಣಕಲ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಕರೆದೊಯ್ದರು. ಆದರೆ, ತೀವ್ರ ಹೃದಯಾಘಾತಕ್ಕೊಳಗಾಗಿದ್ದ ಮಧುಸೂದನ್ ಮಾರ್ಗ ಮಧ್ಯೆಯೇ ಸಾವನ್ನಪ್ಪಿದ್ದಾರೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು