7:18 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸಿಎಂ ಸ್ವಾಗತಕ್ಕೆ ಭರ್ಜರಿ ತಯಾರಿ : ಸ್ಥಳೀಯಾಡಳಿತದಿಂದ ನಡೆಯಿತು ಕಣ್ಕಟ್ಟಿನ ರಸ್ತೆ ರಿಪೇರಿ.!!

11/08/2021, 22:41

ಮಂಗಳೂರು(Reporterkarnataka.com)
ರಾಜ್ಯದ ನೂತನ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ್ ಬೊಮ್ಮಾಯಿ ಇದೇ ಮೊದಲ ಬಾರಿ ಮಂಗಳೂರಿಗೆ ಆಗಮಿಸುತ್ತಿದ್ದಾರೆ.

ಸಿಎಂ ಸ್ವಾಗತಕ್ಕೆ ಕೆಂಜಾರು ಹಾಗೂ ಮರವೂರು ಸೇತುವೆಯಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ.

ಇದರ ಜತೆಗೆ ಮಂಗಳೂರು ವಿಮಾನ ನಿಲ್ದಾಣದಿಂದ ನಿರ್ಗಮಿಸುವ ದಾರಿಯ ಕೆಂಜಾರ್ ಜಂಕ್ಷನ್‌ನಲ್ಲಿ ಹುಲ್ಲು ಕಳೆಗಳನ್ನು ಕೂಡ ಕೀಳುವ ಕೆಲಸ ನಡೆಯಿತು.

ಆದರೆ ಮರವೂರು ಸೇತುವೆಯಾಚೆಗಿನ ಹಾಳಾದ ರಸ್ತೆಗೆ ಪಕ್ಕ ವ್ಯವಸ್ಥೆ ಮಾಡದೆ ಬರಿ ಜಲ್ಲಿ ಕಲ್ಲು ಹಾಗೂ ಜಲ್ಲಿ ಕಲ್ಲಿನ ಹುಡಿಯನ್ನು ಹಾಕಿ ತೇಪೆ ಹಚ್ಚುವ ಕೆಲಸ ನಡೆದಿದೆ. ಅದೂ ಕೂಡ ಇಂದು ಸಂಜೆ ಸ್ಥಳೀಯ ಆಡಳಿತ ವ್ಯವಸ್ಥೆಯ ಕಣ್ತೆರೆದಿದ್ದು, ಸಿಎಂ ಆಗಮನದ ಸಂದರ್ಭ ಕಣ್ಕಟ್ಟಿನ ಕೆಲಸವನ್ನೆ ಸ್ಥಳೀಯ ಆಡಳಿತ ಮಾಡುತ್ತಿದೆ ಎನ್ನುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ.
ಇಲ್ಲಿಯ ರಸ್ತೆ ಪ್ರತಿ ವರ್ಷವೂ ಹದಗೆಟ್ಟು ಕಿತ್ತು ಹೋದರೂ ಸ್ಥಳೀಯ ಜಿಲ್ಲಾಡಳಿತದ ಗಮನಕ್ಕೆ ಇದು ಬರುವುದೇ ಇಲ್ಲ. ಯಾರಾದರೂ ರಾಜಕೀಯ ಧುರೀಣರು ಬರುವ ಸಂದರ್ಭದಲ್ಲಿ ಮಾತ್ರ ಇಲ್ಲಿಯ ಜನ ಪ್ರತಿನಿಧಿಗಳಿಗೆ ಹಾಳಾದ ರಸ್ತೆ ಕಣ್ಣಿಗೆ ಕಾಣುತ್ತದೆ ಆದರೆ ಶಾಶ್ವತವಾಗಿ ಸಮಸ್ಯೆ ನಿರ್ಮೂಲನೆ ಬಗ್ಗೆ ಕ್ರಮ ತೆಗೆದುಕೊಳ್ಳಲು ಸತತವಾಗಿ ಹಿಂದೇಟು ಹಾಕುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು