1:44 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಪ್ರೇಮ ವೈಫಲ್ಯ?: ಯುವಕನಿಂದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ; ಪಕ್ಕದಲ್ಲಿದ್ದ ಇನ್ನಿಬ್ಬರೂ ವಿದ್ಯಾರ್ಥಿನಿಯರಿಗೂ ಗಾಯ

04/03/2024, 16:53

ಮಂಗಳೂರು(reporterkarnataka.com): ಕಡಬ ತಾಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅವರಣದಲ್ಲಿ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೋರ್ವಳ ಮೇಲೆ ಆ್ಯಸಿಡ್​ ಎರಚಿದ್ದು, ಪಕ್ಕದಲ್ಲಿದ್ದ ಇನ್ನಿಬ್ಬರು ವಿದ್ಯಾರ್ಥಿ ನಿಯರೂ ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ನಡೆದಿದೆ.
ವಿದ್ಯಾರ್ಥಿನಿಯೋರ್ವಳ ಮೇಲೆ ಕಾಲೇಜು ಆವರಣದಲ್ಲೇ ಆ್ಯಸಿಡ್​ ಎರಚಿದ್ದಾನೆ. ಈ ವೇಳೆ ಪಕ್ಕದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಆ್ಯಸಿಡ್​ ತಗುಲಿದೆ. ಗಾಯಗೊಂಡಿರುವ ಮೂವರೂ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯನ್ನು ಕೇರಳದ ಮಲ್ಲಪುರಂ ಜಿಲ್ಲೆಯ 23 ವರ್ಷದ ಯುವಕ ಎಂದು ಗುರುತಿಸಲಾಗಿದೆ. ಈತನನ್ನು ಇತರ ವಿದ್ಯಾರ್ಥಿಗಳು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿ ಮತ್ತು ಆ್ಯಸಿಡ್ ದಾಳಿಗೊಳಗಾದ ವಿದ್ಯಾರ್ಥಿನಿ ಒಂದೇ ಕೋಮಿಗೆ ಸೇರಿದವರಾಗಿದ್ದಾರೆ. ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನೆಯನ್ನು ಖಂಡಿಸಿ ಟ್ವೀಟ್​ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, “ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಸರ್ಕಾರಿ ಪಿಯು ಕಾಲೇಜಿನ ಹೆಣ್ಣು ಮಕ್ಕಳ ಮೇಲೆ ಆಸಿಡ್ ಎರಚಿರುವ ಘಟನೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿರುವುದಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದ್ದು, ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಗಾಯಾಳು ಹೆಣ್ಣುಮಕ್ಕಳು ಅಪಾಯದಿಂದ ಪಾರಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು