12:45 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮಾರ್ಚ್ 25: ಮಂಗಳೂರಿನ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚ್ ನೇತೃತ್ವದಲ್ಲಿ ‘ಶಿಲುಬೆಯ ಹಾದಿ’

12/03/2024, 16:12

ಮಂಗಳೂರು(reporterkarnataka.com): ನಗರದ ಕೊರ್ಡೆಲ್ ಹೋಲಿ ಕ್ರಾಸ್ ಚರ್ಚು ನೇತೃತ್ವದಲ್ಲಿ ಮಾರ್ಚ್ 25ರಂದು ಸಂಜೆ 4.30 ಗಂಟೆಗೆ “ಶಿಲುಬೆಯ ಹಾದಿ” (ಕುರ್ಸಾಚಿ ವಾಟ್) ನ್ನು ಸಿಟಿ ವಲಯದ 12 ಚರ್ಚುಗಳ ಸಹಯೋಗದಿಂದ ನಡೆಸಲಾಗುತ್ತದೆ.

ಕೊರ್ಡೆಲ್, ವಾಮಂಜೂರ್, ಪಾಲ್ದಾನೆ, ಬೊಂದೇಲ್, ದೇರೆಬೈಲು, ನೀರುಮಾರ್ಗ, ಕೆಲರೈ, ಬಜ್ಜೊಡಿ, ಕಪಿತಾನಿಯೋ, ಬಜಾಲ್, ಪೆರ್ಮಾಯಿ, ಶಕ್ತಿನಗರ ಚರ್ಚುಗಳು ಭಾಗವಹಿಸಲಿದ್ದು, ಏಸುಕ್ರಿಸ್ತರು ಶಿಲುಬೆಯ 14 ಹಾದಿಗಳನ್ನು ಈ ಚರ್ಚುಗಳ ಕಲಾವಿದರ ನಟನೆಯ ಮೂಲಕ ಚರ್ಚಿನ ಆವರಣದ ಒಳಗೆ ನಡೆಸಲಾಗುವುದು. ಶಿಲುಬೆಯ ಹಾದಿಯ 14 ನಿಲ್ದಾಣಗಳನ್ನು (ಸ್ಟೇಶನ್) ನ್ನು ವಲಯದ 12 ಚರ್ಚುಗಳ ಹಾಗೂ ಧರ್ಮಗುರುಗಳ ಮತ್ತು ಧರ್ಮಭಗಿನಿಯರ ಪ್ರತಿನಿಧಿಗಳು ನಡೆಸಿಕೊಡುತ್ತಾರೆ. ಸಂಜೆ 4.30ಕ್ಕೆ ಬಲಿಪೂಜೆ, ನಂತರ ಶಿಲುಬೆಯ ಹಾದಿ, 12ನೇ ನಿಲ್ದಾಣದಲ್ಲಿ ಪ್ರವಚನವನ್ನು ನಡೆಸಿಲಾಗುವುದು.
ಈ ಬಗ್ಗೆ ಪೂರ್ವಭಾವಿ ಸಭೆಯಲ್ಲಿ ಚರ್ಚಿನ ಪ್ರಧಾನ ಧರ್ಮಗುರುಗಳಾದ ವಂ| ಪಾ| ಕ್ಲಿಫರ್ಡ್ ಫೆರ್ನಾಂಡಿಸ್ ಅವರು
ಸ್ಕ್ರಿಪ್ಟ್ ಬಿಡುಗಡೆ ಮಾಡಿದರು. ಸಹಾಯಕ ಧರ್ಮಗುರುಗಳಾದ ವಂ| ಪಾ| ಪಾವುಲ್ ಡಿ’ಸೋಜ, ಧರ್ಮಪ್ರಾಂತ್ಯದ ಪಿ.ಆರ್.ಓ. ರೋಯ್ ಕ್ಯಾಸ್ಟಲಿನೋ, ಚರ್ಚಿನ ಉಪಾಧ್ಯಕ್ಷ ರೂತ್ ಕ್ಯಾಸ್ಟಲಿನೋ, ಕಾರ್ಯದರ್ಶಿ ಅನಿಲ್ ಡೆಸಾ, ಸರ್ವ ಆಯೋಗದ ಸಂಚಾಲಕ ಡೊಲ್ಫಿ ಡಿ’ಸೋಜ, 12 ಚರ್ಚುಗಳ ಉಪಾಧ್ಯಕ್ಷರು ಉಪಸ್ಥಿತರಿದ್ದರು. ಕಲಾವಿದರಿಗೆ ನಿರ್ದೇಶಕರಾಗಿ ಡೆನ್ನಿಸ್ ಮೊಂತೆರೋ ಹಾಗೂ ಸ್ಟಾö್ಯನಿ ಅಲ್ವಾರೀಸ್, ಏಸು ಕ್ರಿಸ್ತರ ಪಾತ್ರ ವನ್ನು ವಿಕಾಸ್ ಕುಲಾಕುಲ್, ಮದರ್ ಮೇರಿಯ ಪಾತ್ರವನ್ನು ಆ್ಯಶೆಲ್ ಡಿ’ಸಿಲ್ವಾ, ಪಿಲಾತನ ಪಾತ್ರವನ್ನು ಆಲ್ವಿನ್ ಪಾಯಸ್ ಮುಂತಾದವರು ನಿರ್ವಹಿಸಲಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು