5:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವೆನ್ ಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಒದಗಿಸಿದ ಮಂಗಳೂರಿನ ಸೇವ್ ಲೈಫ್  ಟ್ರಸ್ಟ್ ಗೆ ಪ್ರಶಂಸನಾ ಪತ್ರ

19/05/2021, 10:53

ಮಂಗಳೂರು(reporterkarnataka news) :  ಕೊರೊನಾ ಎರಡನೇ ಅಲೆಯ ಕಷ್ಟಕಾಲದಲ್ಲಿ

ಜಿಲ್ಲಾ ವೆನಲಾಕ್ ಆಸ್ಪತ್ರೆಗೆ 6 ಓಕ್ಸಿಜೆನ್ ಕಾನ್ಸನ್ಟ್ರೇಟರ್ಸ್ ಳನ್ನು ಒದಗಿಸಿದ ನಗರದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಗೆ ವೆನ್ ಲಾಕ್ ಆಸ್ಪತ್ರೆ ವತಿಯಿಂದ ಪ್ರಶಂಸನಾ ಪತ್ರ ನೀಡಲಾಗಿದೆ.

ಟ್ರಸ್ಟ್ ನ ಅಧ್ಯಕ್ಷ ಅರ್ಜುನ್ ಭಂಡಾರ್ ಕಾರ್ ಅವರ ಹೆಸರಿಗೆ ವೆನ್ ಲಾಕ್ ಆಸ್ಪತ್ರೆಯ ಅಧ್ಯಕ್ಷರು ಪ್ರಶಂಸನಾ ಪತ್ರ ಕಳುಹಿಸಿಕೊಟ್ಟಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಜಿಲ್ಲೆಯಲ್ಲಿ  ಆರ್ಥಿಕವಾಗಿ ಹಿಂದುಳಿದ ಹಾಗೂ ವೈದ್ಯಕೀಯ ಸೌಲಭ್ಯದಿಂದ ವಂಚಿತರಾದ ಜನರಿಗೆ ಸಾಮಾಜಿಕ ಜಾಲತಾಣದ ಮುಖಾಂತರ ಹಣ ಸಂಗ್ರಹಿಸಿ ವೈದ್ಯಕೀಯ ವೆಚ್ಚ ಭರಿಸುತಿದ್ದು, ಸಾರ್ವಜನಿಕ ವಲಯದಲ್ಲಿ ಪ್ರಶಂಸೆಗೆ ಪಾತ್ರವಾಗಿದೆ.  ಕಳೆದ 10 ತಿಂಗಳಿನಲ್ಲಿ 200 ಕ್ಕೂ ಅಧಿಕ ಬೇರೆ ಬೇರೆ ಕಾರಣಗಳಿಗೆ 1.1 ಕೋಟಿಗೂ ಅಧಿಕ ಮೊತ್ತ ಸಹಾಯ ಹಸ್ತ ಚಾಚಿದ್ದು , ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ. ಈ ಬಾರಿ  ಮಂಗಳೂರು , ಬಂಟ್ವಾಳ , ಉಡುಪಿಯ 700 ಕುಟುಂಬಗಳಿಗೆ ಅಗತ್ಯ ವಸ್ತುಗಳ ಕಿಟ್ ಗಳನ್ನು ವಿತರಿಸಲಾಗಿದೆ ,   ಮಹಾಮಾರಿಯ ಎರಡನೇ ಅಲೆಯು ವಿಪರೀತವಾಗಿ ಹರಡುತ್ತಿದ್ದು , ರಾಜ್ಯಾ ದ್ಯಂತ ಕೈ ಮೀರಿಹೋಗಿರುತ್ತದೆ , ಈ ಪರಿಸ್ಥಿತಿಯನ್ನು ಮನಗಂಡು  ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 6 ಓಕ್ಸಿಜೆನ್  ಕಾನ್ಸನ್ಟ್ರೇಟರ್ಸ್ ಗಳನ್ನು ಜಿಲ್ಲಾ ವೆನಲಾಕ್ ಆಸ್ಪತ್ರೆಗೆ ನೀಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು