3:13 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಸಿದ್ಧಿ ಸಮುದಾಯದ ನಾಯಕ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಡಿಯಾಗೋ ಇನ್ನಿಲ್ಲ

13/08/2021, 10:46

ಕಾರವಾರ(reporterkarnataka.com):

ಸಿದ್ಧಿ ಸಮುದಾಯದ ನಾಯಕ, ಹೋರಾಟಗಾರ, ಕರ್ನಾಟಕದ ನೆಲ್ಸನ್ ಮಂಡೇಲಾ ಎಂದೇ ಖ್ಯಾತರಾದ ಯಲ್ಲಾಪುರ ತೊಟ್ಟಿಲ್ಗುಂಡಿಯ ( ಹಳಿಯಾಳ ) ಡಿಯಾಗೋ ಬಸ್ತ್ಯಾವ್ ಸಿದ್ಧಿ ನಿಧನರಾಗಿದ್ದಾರೆ.

ಡಿಯಾಗೋ ಅವರು ತನ್ನ ಬದುಕಿನ ಪೂರ್ತಿ ಸಿದ್ಧಿ ಸಮುದಾಯದ ವಿಕಸನ, ಪಶ್ಚಿಮ ಘಟ್ಟ ಸಂರಕ್ಷಣೆ, ಸಮಾಜ ಸುಧಾರಣೆ ಬಗ್ಗೆ ಹೋರಾಟ ನಡೆಸಿದ್ದಾರೆ.

ತನ್ನ ವೈಯಕ್ತಿಕ ಬದುಕಿನ ಬಗ್ಗೆ ಚಿಂತಿಸದೇ ತನ್ನ ಸಮುದಾಯದ ಮತ್ತು ಸಮಾಜ, ಪ್ರಕೃತಿ ಸಂರಕ್ಷಣೆಯ ಬಗ್ಗೆ ಚಿಂತಿಸುತ್ತಾ ಮತ್ತು ಅದರ ಬಗ್ಗೆ ಕಾರ್ಯ ಪ್ರವೃತ್ತರಾಗಿ ಬಂದಿದ್ದಾರೆ. ಅವರು ಯಲ್ಲಾಪುರದಿಂದ ಆರಂಭಗೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸಿದ್ದಾರೆ.

ಪರಿಸರ ಹೋರಾಟಗಾರ ದಿನೇಶ್ ಹೊಳ್ಳ ಅವರು ಡಿಯಾಗೋ ಅವರನ್ನು ಹತ್ತಿರದಿಂದ ಬಲ್ಲವರಾಗಿದ್ದಾರೆ. ಅವರ ಹೋರಾಟದಲ್ಲಿ ನೇರವಾಗಿ ಪಾಲ್ಗೊಂಡ ಅನುಭವ ಹೊಂದಿದ್ದಾರೆ. ಡಿಯಾಗೋ ಅವರು ಇತ್ತೀಚೆಗೆ ಅನಾರೋಗ್ಯಪೀಡಿತರಾದ ಬಳಿಕವೂ ಅವರನ್ನು ಭೇಟಿಯಾಗಿ ಯೋಗಕ್ಷೇಮ ವಿಚಾರಿಸಿ ಬಂದಿದ್ದಾರೆ.

ಡಿಯಾಗೋ ಅವರ ಸಾವಿನ ಸುದ್ದಿ ಕೇಳಿ ಸಹಿಸಲು ಬಹಳ ಕಷ್ಟವಾಯಿತು. ಅವರ ಹೋರಾಟದ ದಿನಗಳು, ಕೆಚ್ಚೆದಯ ಕ್ಷಣಗಳು , ಸಮುದಾಯದ ಏಳಿಗೆಯ ಬಗ್ಗೆ ಅವರು ತೆಗೆದುಕೊಂಡ ನಿರ್ಣಯಗಳು ನಮ್ಮನ್ನು ಯಾವಾಗಲೂ ಎಚ್ಚರಿಸುವಂತಿದೆ. ಅವರ ಕೊನೆಯ ಆಶೋತ್ತರಗಳನ್ನು ನೆರವೇರಿಸಲು ಪ್ರಯತ್ನ ಆಗಲೇ ಬೇಕಾದ ಅನಿವಾರ್ಯತೆ ಈಗ ನಮ್ಮ ಮುಂದೆ ಇದೆ. 

– ದಿನೇಶ್ ಹೊಳ್ಳ, ಪರಿಸರಪರ ಹೋರಾಟಗಾರ

ಇತ್ತೀಚಿನ ಸುದ್ದಿ

ಜಾಹೀರಾತು