4:07 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಆ.15ರ ಬಳಿಕ ಕಠಿಣ ನಿಯಮ ಜಾರಿ ಕುರಿತು ಮುಖ್ಯಮಂತ್ರಿ ಬೊಮ್ಮಾಯಿ ಸುಳಿವು

13/08/2021, 15:23

ಉಡುಪಿ (reporterkarnataka.com): ರಾಜ್ಯದಲ್ಲಿ ಕೊರೊನಾ ಸೋಂಕು ಚಿಕ್ಕ ಮಕ್ಕಳಲ್ಲಿ ಕೂಡ ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸುಳಿವು ನೀಡಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಜತೆ ಮಾತನಾಡಿದ ಸಿಎಂ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದಾಗಿ ಹೇಳಿದ್ದಾರೆ.

ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು