7:50 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡು: ಹುಲ್ಲಹಳ್ಳಿ ಹಾಗೂ ಕಳಲೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ

06/04/2024, 19:54

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ನಂಜನಗೂಡು ಕಾಂಗ್ರೆಸ್ ವತಿಯಿಂದ ಹುಲ್ಲಹಳ್ಳಿ ಹಾಗೂ ಕಳಲೆ ಜಿಲ್ಲಾ ಪಂಚಾಯಿತಿ ಕೇಂದ್ರ ಸ್ಥಾನಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತ ಮುಖಂಡರ ಸಭೆ ನಡೆಸಲಾಯಿತು.
ಸಭೆಯ ಉದ್ಘಾಟನೆಯನ್ನು ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಸೇರಿದಂತೆ ಮತ್ತು ಇತರ ಗಣ್ಯರು ದೀಪ ಬೆಳಗಿಸುವ ಮೂಲಕ ನೆರವೇರಿಸಿದರು.
ಬಳಿಕ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ವಿಧಾನಸಭಾ ಚುನಾವಣೆಯಂತೆ ಈ ಚುನಾವಣೆಯಲ್ಲಿ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮತಯಾಚನೆ ಮಾಡಲಾಗುವುದಿಲ್ಲ. ಹಾಗಾಗಿ ಈ ರೀತಿ ಜಿಲ್ಲಾ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಸಭೆ ಕರೆದು ಮತಯಾಚನೆ ಮಾಡುತ್ತಿದ್ದೇನೆ.


ನಾನು ಕೂಡ ನಂಜನಗೂಡಿನಲ್ಲಿ ಹುಟ್ಟಿದವನು. ಹಾಗಾಗಿ ನಿಮ್ಮ ಮನೆಯ ಮಗನೆಂದು ತಿಳಿದು ನನಗೆ ಆಶೀರ್ವದಿಸಿ. ನಿಮ್ಮ ಸೇವೆ ಮಾಡುವ ಅವಕಾಶ ಕಲ್ಪಿಸಿಕೊಡಿ ಎಂದು ಮನವಿ ಮಾಡಿಕೊಂಡರು.
ಶಾಸಕ ದರ್ಶನ್ ದ್ರುವ ನಾರಾಯಣ್ ಮಾತನಾಡಿ, ಚುನಾವಣೆಗೆ ಮುನ್ನ ನೀಡಿದ್ದ ಪ್ರಮುಖ 5 ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನುಡಿದಂತೆ ನಡೆದ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸುವ ಮೂಲಕ ನಮ್ಮ ಅಭ್ಯರ್ಥಿ ಸುನಿಲ್ ಬೋಸ್ ಅವರನ್ನು ಗೆಲ್ಲಿಸುವಂತೆ ಕಾರ್ಯಕರ್ತ ಮುಖಂಡರಿಗೆ ತಿಳಿಸಿದರು.
ಮಾಜಿ ಶಾಸಕ ಕಳಲೆ ಕೇಶವಮೂರ್ತಿ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಬಿ. ಜೆ. ವಿಜಯ್ ಕುಮಾರ್ ಮಾತನಾಡಿ, ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.
ಆಯಾಯ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಸದಸ್ಯ ಹುಲ್ಲಹಳ್ಳಿ ಬಸವರಾಜ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಲತಾ ಸಿದ್ದಶೆಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಕುರಟ್ಟಿ ಮಹೇಶ್, ಶಂಕರ್ ,ಮುಖಂಡರುಗಳಾದ ಇಂಧನ ಬಾಬು, ಬುಲೆಟ್ ಮಹಾದೇವಪ್ಪ, ಮಂಜುನಾಥ್, ಗಿರೀಶ್, ಗ್ರಾಮ ಪಂಚಾಯತಿ ಅಧ್ಯಕ್ಷ ಕಳಲೆ ಮಹೇಶ್, ಕರಳಪುರ ನಾಗರಾಜ್, ಚಾಮರಾಜ್ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು