11:25 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮದುವೆ ಮಂಟಪದಂತೆ ಸಿಂಗಾರಗೊಂಡ ಮತದಾನ ಕೇಂದ್ರ; ಬಿಳಿ ಪಂಚೆ -ಶರ್ಟು, ಮೈಸೂರು ಪೇಟ ತೊಟ್ಟ ಅಧಿಕಾರಿಗಳು!!

26/04/2024, 17:56

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ತೆಂಗಿನ ಗರಿಯ ಚಪ್ಪರ ಹಾಕಿ ಮಾವು, ಬಾಳೆ, ತಳಿರು ತೋರಣಗಳಿಂದ ಸಿಂಗಾರಗೊಂಡ ಮತದಾನ ಕೇಂದ್ರ, ಬಿಳಿ ಪಂಚೆ, ಶರ್ಟಿನ ಜೊತೆ ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯದಲ್ಲಿ ನಿರತರಾದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು. ಹಾಗಾದ್ರೆ ವಿಭಿನ್ನ ಮತ್ತು ವಿಶೇಷ ಕಾರ್ಯವೈಖರಿಗೆ ಕಾರಣ ಏನು ಅಂತೀರಾ ಇಲ್ಲಿದೆ ನೋಡಿ..!


ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜೆಎಸ್ಎಸ್ ಕಾಲೇಜಿನ ಮತಗಟ್ಟೆಯಲ್ಲಿ ನಡೆಯುತ್ತಿರುವ ಮತದಾನ.
ಬಿಳಿ ಶರ್ಟ್ ಪಂಚೆ, ಮೈಸೂರು ಪೇಟ ಧರಿಸಿ ಚುನಾವಣಾ ಕರ್ತವ್ಯಕ್ಕೆ ಹಾಜರಾದ ಚುನಾವಣಾ ಸಿಬ್ಬಂದಿಗಳು.
ಪ್ರಜಾಪ್ರಭುತ್ವದ ಹಬ್ಬ ಆಚರಣೆಗೆ ಸಾಂಸ್ಕೃತಿಕ ಸೌರಭ ಎಂಬ ಮತಗಟ್ಟೆ ತೆರೆದು ವಿನೂತನವಾಗಿ ಮತದಾರರಿಂದ ಮತದಾನ ಮಾಡಿಸಿಕೊಳ್ಳುತ್ತಿರುವ ಅಧಿಕಾರಿಗಳು.
ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಯುವ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಖಿ, ರೈತ ಮತ್ತು ಯುವ ಮತಗಟ್ಟೆಗಳನ್ನು ತೆರೆಯಲಾಗಿದೆ ಆದರೆ ಇಲ್ಲಿ ತೆಂಗಿನ ಗರಿಯ ಚಪ್ಪರಹಾಕಿ ಮಾವು, ಬಾಳೆ,ತಳಿರು ಕಟ್ಟಿ ಸ್ವಾಗತಿಸಿ ಮತದಾರರನ್ನು ತನ್ನತ್ತ ಕೈ ಬೀಸಿ ಕರೆಯುತ್ತಿರುವ ಮತಗಟ್ಟೆಯಾಗಿದೆ.
ಚುನಾವಣಾ ಅಧಿಕಾರಿಗಳ ಈ ಒಂದು ಪ್ರಜಾಪ್ರಭುತ್ವದ ಹಬ್ಬದ ಕಾರ್ಯವೈಕರಿಗೆ ಹ್ಯಾಟ್ಸಾಫ್ ಎನ್ನುತ್ತಾರೆ ಮತದಾರರು.
.

ಇತ್ತೀಚಿನ ಸುದ್ದಿ

ಜಾಹೀರಾತು