5:30 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಶ್ವಕರ್ಮ ಸಮಾಜಕ್ಕೆ ಅವಮಾನ ಮಾಡುವಂತಹ ವಿಡಿಯೋ ಶೇರ್ ಮಾಡಿದ ಮಹಿಳೆ : ದೂರು ನೀಡಿದ ವಿವಿಧ ವಿಶ್ವಕರ್ಮ ಸಂಘಟನೆಗಳು

16/08/2021, 14:43

ಮಂಗಳೂರು(Reporterkarnataka.com)

ವಿಶ್ವಕರ್ಮ ಸಮಾಜದ ಮರದ ಕೆಲಸ ಮಾಡುವವರನ್ನು ಅವಹೇಳನ‌ ಮಾಡುವ ರೀತಿಯಲ್ಲಿ “ಕೆಲಸ ದಾಂತಿನ ಆಚಾರಿ ಬಾಲೆದ *** ಕೆತ್ತಿಯೆ” ಎನ್ನುವ ಮಾತನ್ನು ಅಳವಡಿಸಿದ ವಿಡಿಯೋ ತಯಾರಿಸಿ ಮಂಗಳೂರು ಸುರತ್ಕಲ್‌ನ ಸುಷ್ಮಾ ಎನ್ನುವವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡಿದ್ದು, ಆದ್ದರಿಂದ ಸಮುದಾಯಕ್ಕೆ ಮಾನಸಿಕವಾಗಿ ಹಾಗೂ ಸಾಮಾಜಿಕವಾಗಿ ಅವಮಾನ ಉಂಟಾಗಿದೆ ಎಂದು ಮೂಡಬಿದ್ರಿ ವಿಶ್ವಕರ್ಮ ಜಾಗೃತದಳ ಮೂಡಬಿದ್ರಿ ಪೋಲಿಸ್ ಠಾಣೆಗೆ ದೂರು ನೀಡಿದೆ.

ಸೋಷಿಯಲ್ ಮಿಡಿಯಾ (Instrgram) ಪೇಜ್‌ನಲ್ಲಿ ವಿಶ್ವಕರ್ಮ ಸಮಾಜವನ್ನು ದುರ್ಬಳಕೆ ಮಾಡಿ ಜಾತಿ ನಿಂದನೆ ಮಾಡಿದ ಅರೋಪದಡಿ ಸುರತ್ಕಲ್ ಕ್ರಷ್ಣಾಪುರ ನಿವಾಸಿ “ಸುಷ್ಮಾ” ಎಂಬವರ ವಿರುದ್ಧ ಕಾನೂನು ರೀತಿಯಲ್ಲಿ ಶಿಕ್ಷೆಯಾಗಬೇಕೆಂದು ಮೂಡುಬಿದಿರೆ ವಿಶ್ವಕರ್ಮ ಜಾಗ್ರತದಳ , ಶ್ರೀ ಕಾಳಿಕಾಂಬಾ ಸೇವಾ ಸಮಿತಿ , ಕಾಷ್ಠ ಶಿಲ್ಪ , ಚಿನ್ನದ ಕೆಲಸಗಾರರ ಸಂಘ ದೂರಿನಲ್ಲಿ ತಿಳಿಸಿದೆ.

ವಿಶ್ವಕರ್ಮ ಒಕ್ಕೂಟದ ವತಿಯಿಂದ ಉಡುಪಿ ಸೆನ್ ಪೋಲಿಸ್ ಠಾಣೆಯಲ್ಲಿ ಸುಷ್ಮಾ ಮಯ್ಯ ವಿರುದ್ಧ ದೂರು ದಾಖಲಿಸಲಾಯ್ತು. ಈ ಸಂದರ್ಭದಲ್ಲಿ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಮಧು ಆಚಾರ್ಯ, ಪ್ರಧಾನ ಕಾರ್ಯದರ್ಶಿ ಮುರಳೀಧರ, ಅಲೆವೂರು ಯೋಗೀಶ ಆಚಾರ್, ಸತೀಶ್ ಆಚಾರ್ಯ ಪಡುಬಿದ್ರಿ,ಕಾಪು ವಿಶ್ವಕರ್ಮ ಯುವ ಸಂಘಟನೆ ಅಧ್ಯಕ್ಷರಾದ ಬಿಳಿಯಾರು ಸುಧಾಕರ ಆಚಾರ್ಯ, ಕಾರ್ಯದರ್ಶಿ ರತ್ನಾಕರ ಆಚಾರ್ಯ, ಹರೀಶ ಆಚಾರ್ಯ ಕಳತ್ತೂರು, ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ಅಧ್ಯಕ್ಷರಾದ ಕಿಶೋರ್ ಆಚಾರ್ಯ, ವಿಶ್ವನಾಥ ಆಚಾರ್ಯ ಕಿದಿಯೂರು, ಕಟಪಾಡಿ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಭಾಕರ ಆಚಾರ್ಯ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು