7:34 AM Saturday8 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಮೂಡುಬಿದಿರೆಯಲ್ಲೊಂದು ಹೃದಯ ವಿದ್ರಾವಕ ಘಟನೆ : ಸಂಶಯಪಟ್ಟು ಪತ್ನಿಯನ್ನೇ ಹೊಡೆದು ಕೊಂದ ಪತಿರಾಯ

18/08/2021, 14:34

ಮೂಡಬಿದ್ರಿ (Reporterkarnataka.com)

ಮೂಡುಬಿದಿರೆ ತಾಲೂಕಿನ ದರೆಗುಡ್ಡೆ ಗ್ರಾ.ಪಂ. ವ್ಯಾಪ್ತಿಯ ಮಠ ಎಂಬಲ್ಲಿ ಪತ್ನಿಯ ಮೇಲೆ ಸಂಶಯಪಟ್ಟು ಕೊಲೆ ಮಾಡಿದ ಪ್ರಕರಣ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಮಂಗಳವಾರ ಸಂಜೆ ಪತಿ ಪತ್ನಿಯರ ನಡುವೆ ಜಗಳ ನಡೆದಿದ್ದು, ದಿನರಾಜ್ ಹೆಂಡತಿಯ ತಲೆಗೆ ಬಲಾಯಿ ಎನ್ನುವ ಸಲಾಕೆ ಹಿಡಿಯಲ್ಲಿ ಹೊಡೆದಿದ್ದಾನೆ. ತಲೆ, ಮುಖ, ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದಿದ್ದು ರಕ್ತ ಸೋರತೊಡಗಿತ್ತು. ಸುನೀತಾ ನೆಲಕ್ಕೆ ಉರುಳಿದ ಬಳಿಕ ಆಕೆಯ ತಾಯಿ ಬೊಬ್ಬೆ ಹೊಡೆದಿದ್ದರಿಂದ ಪತ್ನಿಯನ್ನು ದಿನರಾಜನೇ ಬೆಳುವಾಯಿಯ ಸರಕಾರಿ ಆಸ್ಪತ್ರೆಗೆ ದಾಖಲಿಸಲು ತಂದಿದ್ದಾನೆ.

ಆದರೆ, ಆಸ್ಪತ್ರೆಯಲ್ಲಿ ಪತ್ನಿ ಮಹಡಿ ಮೇಲಿಂದ ಬಿದ್ದು ಗಾಯವಾಗಿದ್ದೆಂದು ಸುಳ್ಳು ಹೇಳಿದ್ದಾನೆ. ಆದರೆ, ವೈದ್ಯರು ನೋಡಿ, ಈಕೆಯ ಸ್ಥಿತಿ ಗಂಭೀರ ಆಗಿರುವುದರಿಂದ ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ಹಾಗೂ ಸಂಶಯಗೊಂಡು ಮೂಡುಬಿದ್ರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಭಾರೀ ರಕ್ತಸ್ರಾವದ ಜೊತೆಗೆ ಮುಖ, ಕುತ್ತಿಗೆಯ ಭಾಗಕ್ಕೆ ಕಡಿದ ರೀತಿಯ ಗಾಯ ಆಗಿದ್ದರಿಂದ ವೈದ್ಯರು ಸಂಶಯಪಟ್ಟು ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಿನ್ನೆ ರಾತ್ರಿ ಮಂಗಳೂರಿನ ಎಜೆ ಆಸ್ಪತ್ರೆಗೆ ತರುವಷ್ಟರಲ್ಲಿ ಭಾರೀ ರಕ್ತಸ್ರಾವದಿಂದಾಗಿ ಅಲ್ಲಿಗೆ ತಲುಪುವ ಮೊದಲೇ ಮೃತಪಟ್ಟಿದ್ದಾಳೆ. ಇಂದು ಬೆಳಗ್ಗೆ ಮೂಡಬಿದಿರೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು ವಿಚಾರಣೆ ವೇಳೆ ತಾನೇ ಹೊಡೆದಿದ್ದನ್ನು ಒಪ್ಪಿಕೊಂಡಿದ್ದಾನೆ.

ಬಡ ಕುಟುಂಬದ ಸುನೀತಾ ತನ್ನ ತಾಯಿಯೊಂದಿಗೆ ಬಾಡಿಗೆ ಮನೆಯಲ್ಲಿ ಜೀವನ ನಡೆಸುತ್ತಿದ್ದರು. ಒಂದೂವರೆ ವರ್ಷಗಳ ಹಿಂದೆ ಸಂಬಂಧಿಕರು ಸೇರಿ ಮದುವೆ ಮಾಡಿಸಿದ್ದರು. ತಾಯಿ ಒಬ್ಬಳೆ ಮನೆಯಲ್ಲಿ ಇದ್ದುದರಿಂದ ಸುನೀತಾ ಅಲ್ಲಿಯೇ ಉಳಿದುಕೊಂಡಿದ್ದು, ದಿನ್‌ರಾಜ್ ಕೂಡಾ ಅಲ್ಲಿಯೇ ಇದ್ದು ಮೂಡುಬಿದಿರೆಯಲ್ಲಿ ಬ್ಯಾಟರಿ ಅಂಗಡಿಗೆ ಕೆಲಸಕ್ಕೆ ಬರುತ್ತಿದ್ದಾನೆನ್ನಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು