4:45 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ನಿಂದ 2 ದಿನಗಳ ರಾಷ್ಟ್ರೀಯ ಕಾರ್ಯಾಗಾರ

18/05/2024, 23:05

ಮಂಗಳೂರು(reporterkarnataka.com) ಯೇನಪೊಯ ಇನ್‌ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್ ಮತ್ತು ಮ್ಯಾನೇಜ್‌ಮೆಂಟ್ ಕಾಲೇಜಿನ ಯೇನಪೊಯ ರಿಸರ್ಚ್ ಸೆಂಟರ್ ಫಾರ್ ಫೈನಾನ್ಸ್ ಆಂಡ್ ಆ್ಯಂಟರ್‌ಪ್ರಿನರ್‌ಶಿಪ್ ಡೆಲವಪ್‌ಮೆಂಟ್ ವತಿಯಿಂದ ಎರಡು ದಿನಗಳ ರಾಷ್ಟ್ರೀಯ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.
ಕಾಂಪ್ರಹೆನ್ಸಿವ್ ಸ್ಟ್ರಾಟಜೀಸ್ ಆ್ಯಂಡ್ ಎಕ್ಸ್‌ಪರ್ಟ್ ಗೈಡೆನ್ಸ್ ಫಾರ್ ಪಬ್ಲಿಕೇಶನ್ ಇನ್ ಟಾಪ್ ಟೈಯರ್ ಜರ್ನಲ್ಸ್- ರಿಸರ್ಚ್ ಡಿಸೈನ್ ಆಂಡ್ ಮಲ್ಟಿವೇರಿಯೇಟ್ ಅನಾಲಿಸಿಸ್- ಹ್ಯಾಂಡ್ಸ್ ಆನ್ ಪ್ರ್ಯಾಕ್ಟೀಸ್ ವಿಷಯದಲ್ಲಿ ಕಾರ್ಯಾಗಾರ ಆಯೋಜಿಸಲಾಯಿತು. ನಬಾರ್ಡ್‌ನ ಘಟಕವಾಗಿರುವ ಬ್ಯಾಂಕರ್ಸ್ ಇನ್‌ಸ್ಟಿಟ್ಯೂಟ್ ಆಫ್ ರೂರಲ್ ಡೆವಲಪ್‌ಮೆಂಟ್ ಜಂಟಿ ನಿರ್ದೇಶಕ ವಿ.ಎಸ್.ಬಾಲಸುಬ್ರಮಣಿಯನ್ ಅವರು ಉದ್ಘಾಟಿಸಿದರು. ಕೋಯಿಕ್ಕೋಡ್ ಐಐಎಂನ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಜೇಶ್ ಎಸ್. ಮುಖ್ಯ ಅತಿಥಿಯಾಗಿದ್ದರು. ಪ್ರಾಂಶುಪಾಲ ಪ್ರೊ. ಅರುಣ್ ಭಾಗವತ್ ಅವರು ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲರಾದ ಡಾ. ಶರೀನಾ ಪಿ., ಡಾ. ಜೀವನ್ ರಾಜ್, ಯೆನ್‌ರಿಫೈನ್ಡ್ ಸಂಯೋಜಕ ಡಾ. ನಿಯಾಝ್ ಪನಕಜೆ ಉಪಸ್ಥಿತರಿದ್ದರು.
ಸಹಾಯಕ ಪ್ರಾಧ್ಯಾಪಕ ಡಾ. ಪ್ರಶಾಂತ್ ಸ್ವಾಗತಿಸಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥ ಮಹಮ್ಮದ್ ಶಾಹಿದ್ ವಂದಿಸಿದರು.
ಸಮಾರೋಪ ಸಮಾರಂಭದಲ್ಲಿ ಪ್ರಾಂಶುಪಾಲರು ಕಾರ್ಯಾಗಾರ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು
ಸಂಶೋಧನಾ ಸಹಾಯಕ ಡಾ. ಅಭಿನಂದನ್ ಕುಲಾಲ್ ಅವರ ಉಸ್ತುವಾರಿಯಲ್ಲಿ ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಕೇರಳ, ಗೋವಾ, ಪಾಂಡಿಚೇರಿ, ತಮಿಳುನಾಡು, ಕೋಲ್ಕತ್ತಾ ಮೊದಲಾದ ಕಡೆಗಳ 102 ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ಡಾ. ಶಕೀರಾ ಇರ್ಫಾನ್, ಸ್ವಾಗತಿಸಿದರು.
ಮ್ಯಾನೇಜ್‌ಮೆಂಟ್ ವಿಭಾಗದ ಮುಖ್ಯಸ್ಥೆ ನೀಕ್ಷಿತಾ ಶೆಟ್ಟಿ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು