10:34 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ನಂಜನಗೂಡು: ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯ ಲೋಕಾರ್ಪಣೆ

21/05/2024, 18:08

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com
ನಂಜನಗೂಡು ತಾಲ್ಲೂಕಿನ ಹರತಲೆ ಗ್ರಾಮದಲ್ಲಿ ನೂತನವಾಗಿ ನಿರ್ಮಾಣ ಮಾಡಲಾಗಿರುವ ಆದಿಶಕ್ತಿ ಶ್ರೀ ನಾಡಮೇಲಮ್ಮ ದೇವಾಲಯವನ್ನು ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ಲೋಕಾರ್ಪಣೆ ಮಾಡಿದರು.


ನೂತನ ದೇವಾಲಯದಲ್ಲಿ ಶ್ರೀ ನಾಡಮೇಲಮ್ಮ ಅಮ್ಮನವರ ಮೂರ್ತಿಯನ್ನು ಕುಳಿರಿಸಿ ಹೂವಿನಿಂದ ಅಲಂಕಾರ ಮಾಡಿ, ಗ್ರಾಮಸ್ಥರು ವಿಶೇಷ ಪೂಜೆಯನ್ನು ಸಲ್ಲಿಸಿದ ಬಳಿಕ ಹೊಸ ನೀರು ತಂದು, ಸತ್ತಿಗೆ, ಸುರ ಪಾಣಿ, ಮಂಗಳವಾದ್ಯದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.
ದೇವಾಲಯದ ಮುಂಭಾಗದಲ್ಲಿ ಹೋಮ-ಹವನ ಮಾಡಿ ವಿವಿಧ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.
ದೇವಾಲಯಕ್ಕೆ ಆಗಮಿಸಿದ ಭಕ್ತರಿಗೆ ಅನ್ನ ದಾಸೋಹದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.
ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಗೌರವಾಧ್ಯಕ್ಷ ಸಿ. ಚಿಕ್ಕರಂಗನಾಯಕ ನೂತನ ದೇವಾಲಯವನ್ನು ಟೇಪ್ ಕತ್ತರಿಸುವ ಮೂಲಕ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು,
ಆದಿಶಕ್ತಿ ಶ್ರೀ ನಾಡಮೇಲಮ್ಮ ಅಮ್ಮನವರ ದೇವಾಲಯವನ್ನು ಸಂತೋಷದಿಂದ ಉದ್ಘಾಟನೆ ಮಾಡಿದ್ದೇನೆ.
ಮುಂಜಾನೆಯಿಂದಲೆ ದೇವಾಲಯದಲ್ಲಿ ಹೋಮ ಹವನ ಮಾಡಿ, ಪೂಜಾ ಕೈಂಕರ್ಯಗಳು ನಡೆದಿವೆ. ದೇವಾಲಯದಲ್ಲಿ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿ, ಹಲವು ಕಾರ್ಯಕ್ರಮಗಳನ್ನು ಮಾಡಿದ್ದಾರೆ. ಗ್ರಾಮದ ಮಹದೇಶ್ವರಸ್ವಾಮಿ ದೇವಾಲಯದಿಂದ ಮೆರವಣಿಗೆ ಮಾಡಲಾಗಿದೆ, ಈ ವರ್ಷ ಮಳೆಯಾದರೆ ರೈತರಿಗೆ ಕೃಷಿ ಚಟುವಟಿಕೆ ನಡೆಸಲು ತುಂಬಾ ಅನುಕೂಲವಾಗಲಿದೆ. ಹಾಗಾಗಿ ಉತ್ತಮ ಮಳೆ, ಬೆಳೆಯಾಗಲಿ ಎಂದು ದೇವರಲ್ಲಿ ನಾನು ಪ್ರಾರ್ಥನೆ ಸಲ್ಲಿಸಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಗೋವಿಂದರಾಜು, ಹಾಲು ಉತ್ಪಾದಕರ ಸಂಘದ ಪರೀಕ್ಷಕ ನಂಜನಾಯಕ, ಎಂ.ಜಿ. ಮಂಜುನಾಥ್, ದೇವರಗುಡ್ಡಪ್ಪ ಮಹೇಶ್, ಮುಖಂಡರಾದ ಮಂಚನಾಯಕ, ಮಹದೇವನಾಯಕ, ಯುವ ಮುಖಂಡರಾದ ಭದ್ರನಾಯಕ, ಮನು ಸೇರಿದಂತೆ ಹಲವರು ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು