3:13 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಂಟ್ವಾಳ: ವಿಶ್ವ ತಂಬಾಕು ನಿಷೇಧ ದಿನಾಚರಣೆ; ಕಾನೂನು ಮಾಹಿತಿ ಕಾರ್ಯಕ್ರಮ

30/05/2024, 21:25

ಬಂಟ್ವಾಳ(reporterkarnataka.com): ಮೋಡಂಕಾಪು ಕಾರ್ಮೆಲ್ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಘಟಕ, ಬಂಟ್ವಾಳ ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ವಕೀಲರ ಸಂಘ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ವಿಶ್ವ ತಂಬಾಕು ನಿಷೇಧ ದಿನಾಚರಣೆಯ ಪ್ರಯುಕ್ತ ಕಾನೂನು ಮಾಹಿತಿ ಕಾರ್ಯಕ್ರಮ ಗುರುವಾರ ಆಯೋಜಿಸಲಾಯಿತು.


ಬಂಟ್ವಾಳ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ
ಚಂದ್ರಶೇಖರ ವೈ ತಳವಾರ ಕಾರ್ಯಕ್ರಮ ಉದ್ಘಾಟಿಸಿದರು.
ಕಾರ್ಮೆಲ್ ಕಾಲೇಜು ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ,ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರಣಿ ಕುಮಾರಿ ಡಿ, (ಸಹಾಯಕ ಸರ್ಕಾರಿ ಅಭಿಯೋಜಕರು ಹಾಗೂ ಕಾರ್ಯನಿರ್ವಾಹಕ ಕಾರ್ಯದರ್ಶಿ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ), ನಿರ್ಮಲಾ ಶೆಟ್ಟಿ (ಕೋಶಾಧಿಕಾರಿ, ವಕೀಲರ ಸಂಘ (ರಿ ), ಬಂಟ್ವಾಳ), ಸಂಪನ್ಮೂಲ ವ್ಯಕ್ತಿ ಆಶಾಮಣಿ ಡಿ ರೈ, (ಹಿರಿಯ ವಕೀಲರು ಬಂಟ್ವಾಳ), ನಿಹಾರಿಕಾ ಶೆಟ್ಟಿ(ಸಂಯೋಜಕರು ಮಾನವ ಹಕ್ಕುಗಳ ಸಂಘ) ಹಾಗೂ ವಿಜೇತಾ (ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಕಾರ್ಮೆಲ್ ಕಾಲೇಜು ಮೊಡಂಕಾಪು) ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಆಶಾಮಣಿ ಡಿ. ರೈ, ವಿಶ್ವ ತಂಬಾಕು ನಿಷೇಧ ಕಾಯ್ದೆಯ ಬಗ್ಗೆ ಕಾನೂನು ಮಾಹಿತಿಯನ್ನು ರಾಷ್ಟ್ರೀಯ ಸೇವಾ ಯೋಜನಾ ಸ್ವಯಂಸೇವಕರಿಗೆ ನೀಡಿದರು.
ಚಂದ್ರಶೇಖರ ವೈ ತಳವಾರ ಅವರು ವಿದ್ಯಾರ್ಥಿಗಳು ಮಾದಕ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗದೆ ಕಲಿಕೆಯ ಮೇಲೆ ಗಮನವನ್ನು ಇಟ್ಟುಕೊಳ್ಳಬೇಕು ಎಂಬ ಮಾಹಿತಿಯನ್ನು ನೀಡಿದರು.


ಪ್ರಾಂಶುಪಾಲರಾದ ಡಾ. ಲತಾ ಫೆರ್ನಾಂಡಿಸ್ ಎ.ಸಿ., ವಿದ್ಯಾರ್ಥಿಗಳ ಜೀವನದಲ್ಲಿ ಪದವಿ ಘಟ್ಟವು ಅತಿ ಮುಖ್ಯವಾಗಿದ್ದು ಯಾವುದೇ ದುಶ್ಚಟಗಳಿಗೆ ಒಳಗಾಗದೆ ಸುಂದರ ಜೀವನವನ್ನು ಕಟ್ಟಿಕೊಳ್ಳಬೇಕು ಎಂಬ ಸಂದೇಶ ನೀಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಪ್ರೇಕ್ಷಾ ನಡೆಸಿಕೊಟ್ಟರು. ಝಹಿದಾ ಸ್ವಾಗತಿಸಿದರು. ಅಲ್ವಿಶ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು