2:12 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಧಾನ ಪರಿಷತ್ ಚುನಾವಣೆ: ಯತೀಂದ್ರ ಸಿದ್ದರಾಮಯ್ಯ, ಐವನ್ ಡಿಸೋಜ ಸಹಿತ 7 ಮಂದಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

02/06/2024, 17:34

ಬೆಂಗಳೂರು(reporterkarnataka.com):ವಿಧಾನಸಭೆಯಿಂದ ವಿಧಾನ ಪರಿಷತ್‌ ನ 11 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ
ಕಾಂಗ್ರೆಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಯತೀಂದ್ರ ಸಿದ್ದರಾಮಯ್ಯ, ಐವನ್ ಡಿಸೋಜ ಸೇರಿದಂತೆ 7 ಮಂದಿಗೆ ಟಿಕೆಟ್ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ, ಹಾಲಿ ಸಚಿವ ಎನ್.ಎಸ್.ಬೋಸರಾಜು, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜು, ವಸಂತ ಕುಮಾರ್, ಜಗದೇವ್ ಗುತ್ತೇದಾರ್, ಐವನ್ ಡಿಸೋಜಾ ಮತ್ತು ಬಿಲ್ಕಿಸ್ ಬಾನೊ ಅವರ ಅಭ್ಯರ್ಥಿತನವನ್ನು ಘೋಷಿಸಲಾಗಿದೆ.
ವಿಧಾನ ಪರಿಷತ್ ನ ಒಟ್ಟು 11 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ವಿಧಾನ ಸಭೆಯಲ್ಲಿ ಸಂಖ್ಯಾಬಲಕ್ಕೆ ಅನುಗುಣವಾಗಿ 7 ಸ್ಥಾನಗಳಲ್ಲಿ ಕಾಂಗ್ರೆಸ್​ ಜಯಗಳಿಸಲಿದೆ. ಆ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ.
ವಿಧಾನಸಭೆ ಚುನಾವಣೆ ವೇಳೆ ಕಾಂಗ್ರೆಸ್ ಗೆ ಬಂದು ಲೋಕಸಭೆ ಚುನಾವಣೆ ವೇಳೆ ಮತ್ತೆ ಬಿಜೆಪಿಗೆ ಮರಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಸನಗೌಡ ಬಾದರ್ಲಿ ಅವರನ್ನ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು