11:15 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ರಾಜ್ಯದಲ್ಲಿ ಕಾಂಗ್ರೆಸ್ ಎಡವಿದ್ದೆಲ್ಲಿ?: ಸಿಎಂ ತನ್ನ ತವರು ಜಿಲ್ಲೆಯಲ್ಲೇ ಗೆಲುವು ತಂದು ಕೊಡಲಿಲ್ಲ!, ಕೆಪಿಸಿಸಿ ಅಧ್ಯಕ್ಷರಿಗೆ ತಮ್ಮನನ್ನೇ ಗೆಲ್ಲಿಸಲಾಗಿಲ್ಲ!!

04/06/2024, 22:42

ಅಶೋಕ್ ಕಲ್ಲಡ್ಕ ಮಂಗಳೂರು
ಅನುಷ್ ಪಂಡಿತ್ ಮಂಗಳೂರು

info.reporterkarnataka@gmail.com

ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆ ಡಬ್ಬಲ್ ಡಿಜಿಟ್ ಗೆ ರೀಚ್ ಆಗಲು ಕೊನೆಗೂ ಸಾಧ್ಯವಾಗಲಿಲ್ಲ. ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು 20, 18, 15 ಅಂತ ಏನೆಲ್ಲ ಸಂಖ್ಯೆ ಕೊಟ್ಟರೂ ಕಾಂಗ್ರೆಸ್ ಗೆ 9ಕ್ಕಿಂತ ಹೆಚ್ಚು ಬಾಚಿಕೊಳ್ಳಲು ಸಾಧ್ಯವಾಗಲಿಲ್ಲ.
ಒಂದು ವರ್ಷದ ಹಿಂದೆ ನಡೆದ ವಿಧಾನಸಭೆ ಚುನಾವಣೆಯಲ್ಲಿ
136 ಸ್ಥಾನಗಳನ್ನು ಪಡೆಯುವ ಮೂಲಕ ನಿಚ್ಚಳ ಬಹುಮತ ಹೊಂದಿದ್ದ ಕಾಂಗ್ರೆಸ್ ಪಕ್ಷಕ್ಕೆ ಲೋಕಸಭೆ ಚುನಾವಣೆಯಲ್ಲಿ 10 ಸ್ಥಾನ ಪಡೆಯಲೂ ಸಾಧ್ಯವಾಗಲಿಲ್ಲ. ರಾಜ್ಯದ ಜನತೆಗೆ ಆರ್ಥಿಕವಾಗಿ ನೆರವಾಗಬಲ್ಲ ಹಲವು ಯೋಜನೆಗಳನ್ನು ನೀಡಿಯೂ ಅದರ ಫಲ ಉಣ್ಣಲು ಕಾಂಗ್ರೆಸ್ಸಿಗೆ ಸಾಧ್ಯವಾಗಲಿಲ್ಲ. ಬದಲಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನ್ನ ತವರು ಜಿಲ್ಲೆಯಲ್ಲೇ ಪಕ್ಷ ವನ್ನು ಗೆಲ್ಲಿಸುವಲ್ಲಿ ವಿಫಲರಾಗಿದ್ದಾರೆ. ಮೈಸೂರು ಲೋಕಸಭೆ ಕ್ಷೇತ್ರದಲ್ಲಿ ಅಪರೂಪದಲ್ಲಿ ಸಾರ್ವಜನಿಕವಾಗಿ ಕಾಣಿಸಿಕೊಳ್ಳುವ ಯದುವೀರ್ ಒಡೆಯರ್ ಗೆಲುವು ಕಂಡಿದ್ದಾರೆ. ಅದೇ ರೀತಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ತಮ್ಮ ಮನೆಯವರನ್ನೇ ಗೆಲ್ಲಿಸಲು ಸಾಧ್ಯವಾಗಲಿಲ್ಲ. ಶಿವಕುಮಾರ್ ಅವರ ತಮ್ಮ ಡಿ.ಕೆ. ಸುರೇಶ್ ಅವರು ಹೃದಯ ತಜ್ಞ ಡಾ. ಮಂಜುನಾಥ್ ಅವರ ಎದುರು ಸೋಲು ಅನುಭವಿಸಿದ್ದಾರೆ. ಬೆಳಗಾವಿಯಲ್ಲಿ ಕಳೆದ ಉಪ ಚುನಾವಣೆಯಲ್ಲಿ ಬಿಜೆಪಿಯ ಮಂಗಳಾ ಅಂಗಡಿ ಎದುರು ಅಲ್ಪ ಮತಗಳ ಅಂತರದಲ್ಲಿ ಸೋತಿದ್ದ ಕಾಂಗ್ರೆಸ್ ಗೆ ಈ ಬಾರಿಯೂ ಗೆಲುವು ದೊರಕಲಿಲ್ಲ. ಅದರ ಬದಲಿಗೆ ಸೋಲಿನ ಅಂತರವನ್ನು ಬಹಳಷ್ಟು ಹೆಚ್ಚಿಸಿಕೊಂಡು ಹೀನಾಯ ಪರಾಭವ ಅನುಭವಿಸಬೇಕಾಯಿತು. ಇಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಪಕ್ಷ ವಿಫಲವಾಗಿರುವುದು ಕೂಡ ಸೋಲಿಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆತ್ಮಾವಲೋಕನ ಮಾಡಿಕೊಳ್ಳುವ ಅಗತ್ಯವಿದೆ ಎನ್ನುವುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು