1:46 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೇಂದ್ರದಲ್ಲಿ ಇಂಡಿಯಾ ಮೈತ್ರಿಕೂಟ ಸರಕಾರ ರಚನೆ: ಡಿಸಿಎಂ ಶಿವಕುಮಾರ್ ಅಖಾಡಕ್ಕೆ; ಚಂದ್ರಬಾಬು ನಾಯ್ಡು ಜತೆ ಮಾತುಕತೆ?

05/06/2024, 19:26

ಬೆಂಗಳೂರು(reporterkarnataka.com): ಕೇಂದ್ರದಲ್ಲಿ ಸರಕಾರ ರಚನೆ ಕುರಿತು ಒಂದು ಕಡೆ ಎನ್ ಡಿಎ ಮೈತ್ರಿಕೂಟದಿಂದ ಭಾರೀ ಪ್ರಯತ್ನ ನಡೆಯುತ್ತಿದ್ದರೆ, ಇನ್ನೊಂದು ಕಡೆ ಇಂಡಿಯಾ ಒಕ್ಕೂಟ ಕೂಡ ಕಸರತ್ತು ನಡೆಸುತ್ತಿದೆ. ಈ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಖಾಡಕ್ಕಿಳಿದಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಎಂದೇ ಪರಿಗಣಿಸಲಾದ ಶಿವಕುಮಾರ್ ಅವರನ್ನು ಸಂಧಾನಕಾರನಾಗಿ ಕಾಂಗ್ರೆಸ್ ಅಖಾಡಕ್ಕಿಳಿಸಿದೆ ಎಂಬ ಮಾಹಿತಿ ಇದೆ. ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಜತೆ ಆಪ್ತ ಒಡನಾಟ ಹೊಂದಿರುವ ಶಿವಕುಮಾರ್ ಅವರನ್ನು ಇಂಡಿಯಾ ಒಕ್ಕೂಟದ ಮಧ್ಯವರ್ತಿಯಾಗಿ ನಾಯ್ಡು ಜತೆ ಮಾತುಕತೆ ನಡೆಸಲು ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಡಿ.ಕೆ. ಶಿವಕುಮಾರ್ ಅವರು ನಿನ್ನೆ ರಾತ್ರಿ ಸುಮಾರು ಅರ್ಧ ತಾಸು ಕಾಲ ಚಂದ್ರಬಾಬು ನಾಯ್ಡು ಅವರ ಜತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು ರಿಪೋರ್ಟರ್ ಕರ್ನಾಟಕಕ್ಕೆ ತಿಳಿಸಿದೆ.
ಪ್ರಸಕ್ತ ಸನ್ನಿವೇಶದಲ್ಲಿ ಪ್ರತಿಪಕ್ಷಗಳ ಒಕ್ಕೂಟವಾದ ಇಂಡಿಯಾಕ್ಕೆ ಒಳ್ಳೆಯ ಅವಕಾಶ ಲಭಿಸಿದೆ. ಇದನ್ನು ಸದುಪಯೋಗಪಡಿಸಿಕೊಳ್ಳೋಣ ಎಂದು ಶಿವಕುಮಾರ್ ಅವರು ನಾಯ್ಡು ಅವರಲ್ಲಿ ಮನವಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ನಾಯ್ಡು ಅವರ ಬೇಡಿಕೆಗಳಿಗೆ ಇಂಡಿಯಾ ಒಕ್ಕೂಟ ಕಡೆಯಿಂದ ಸಕರಾತ್ಮಕ ಪ್ರತಿಕ್ರಿಯೆಯನ್ನು ನೀಡುವ ಭರವಸೆಯನ್ನೂ ಶಿವಕುಮಾರ್ ನೀಡಿದ್ದಾರೆ. ಇದರ ಜತೆ ಎರಡು ಅವಧಿಯಲ್ಲಿ ಮೋದಿ ಸರಕಾರ ಪ್ರತಿಪಕ್ಷಗಳನ್ನು ನಡೆಸಿಕೊಂಡ ರೀತಿ, ಸಿಬಿಐ, ಇಡಿ ದುರ್ಬಳಕ್ಕೆ ಮಾಡಿದ ಬಗ್ಗೆಯೂ ನಾಯ್ಡು ಅವರ ಮನವರಿಕೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು