3:26 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಂಟ್ವಾಳದಲ್ಲಿ ವೆಂಕಟ್ರಮಣ ಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ಶುಭಾರಂಭ

19/06/2024, 18:49

ಬಂಟ್ವಾಳ(reporterkarnataka.com): ಬಂಟ್ವಾಳದಲ್ಲಿ ವೆಂಕಟ್ರಮಣಸ್ವಾಮಿ ಟೆಂಪಲ್ ಪದವಿಪೂರ್ವ ಕಾಲೇಜು ವಿಧ್ಯುಕ್ತವಾಗಿ ಬುಧವಾರ ಸರಸ್ವತಿ ಪೂಜೆಯೊಂದಿಗೆ ಶುಭಾರಂಭಗೊಂಡಿತು.
ಸುಮಾರು 132 ವರ್ಷಗಳ ಇತಿಹಾಸ ಹೊಂದಿರುವ ಬಂಟ್ವಾಳ ಎಸ್.ವಿ.ಎಸ್. ಟೆಂಪಲ್ ಎಜುಕೇಶನ್ ಟ್ರಸ್ಟ್ ವತಿಯಿಂದ ಪದವಿಪೂರ್ವ ಕಾಲೇಜು ಪ್ರಾರಂಭವಾಗಿದೆ.
ಎಸ್.ವಿ.ಎಸ್.ಶಾಲೆಯ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಆಡಳಿತ ಮಂಡಳಿಯ ಪರವಾಗಿ ಕೋಶಾಧಿಕಾರಿ ಬಿ.ಸುರೇಶ್ ಬಾಳಿಗ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜ್ಞಾನ ಮತ್ತು ವಾಣಿಜ್ಯ ತರಗತಿಗಳ ಸಂಯೋಜನೆಗಳನ್ನು ಒಳಗೊಂಡ ಪದವಿ ಪೂರ್ವಕಾಲೇಜು ಬಂಟ್ವಾಳದ ಕೇಂದ್ರ ಪ್ರದೇಶವಾದ ಎಸ್.ವಿ.ಎಸ್.ಟೆಂಪಲ್ ಸ್ಕೂಲ್‌ನ ಕ್ಯಾಂಪಸ್‌ನಲ್ಲಿ ಆರಂಭಗೊಂಡಿದೆ. ಪಿಯುಸಿ ವಿದ್ಯಾಭ್ಯಾಸವನ್ನು ಮುಂದುವರಿಸುವ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿದೆ. ಉತ್ತಮ ವ್ಯವಸ್ಥೆಗಳೊಂದಿಗೆ ಒಳ್ಳೆಯ ಪರಿಸರ ಇದೆ ಎಂದರು. ಸಾಮಾಜಿಕ ಕಾರ್ಯಕರ್ತ ಪ್ರಭಾಕರ ಪ್ರಭುಗಳ ನಿರಂತರ ಪ್ರಯತ್ನದಿಂದ ಕಾಲೇಜು ತುರ್ತಾಗಿ ಆರಂಭಗೊಳ್ಳುವುದಕ್ಕೆ ಸಾಧ್ಯವಾಯಿತು ಎಂದು ಅವರನ್ನು ಅಭಿನಂದಿಸಿದರು.

ವೇದಿಕೆಯಲ್ಲಿ ಟ್ರಸ್ಟ್ ಅಧ್ಯಕ್ಷ ಅಶೋಕ ಶೆಣೈ, ಸಂಚಾಲಕ ಭಾಮಿ ನಾಗೇಂದ್ರನಾಥ ಶೆಣೈ, ಮ್ಯಾನೇಜಿಂಗ್ ಟ್ರಸ್ಟ್ ಸದಸ್ಯರಾದ ಸೂರ್ಯನಾರಾಯಣ ಬಾಳಿಗ , ಅವಿನಾಶ ಕಾಮತ್, ಲಕ್ಷ್ಮೀ ನಾರಾಯಣಯ್ಯ, ಬಿ.ಪ್ರಶಾಂತ ಪೈ, ಗಣೇಶ ಪೈ, ಸುಬ್ರಾಯ ನಾಯಕ್ ವೆಂಕಟ್ರಮಣ ಶೆಣೈ, ಭಾಮಿ ಲಕ್ಷ್ಮಣ ಶೆಣೈ, ಪ್ರಶಾಂತ ಕಿಣಿ ಉಪಸ್ಥಿತರಿದ್ದರು.
ಅರ್ಚಕರಾದ ಮುರಳೀಧರ ಭಟ್ ವೈದಿಕ ಪ್ರಾರ್ಥನೆಯೊಂದಿಗೆ ಸರಸ್ವತಿ ಪೂಜೆ ನೆರವೇರಿಸಿದರು. ಸಂಸ್ಥೆಯ ಉಪನ್ಯಾಸಕರು , ಸಿಬ್ಬಂದಿಗಳು ಮತ್ತು ದೇವಸ್ಥಾನದ ಆಡಳಿತ ವರ್ಗದವರು ಉಪಸ್ಥಿತರಿದ್ದರು. ನೂತನ ಕಾಲೇಜಿನ ಪ್ರಾಂಶುಪಾಲರಾದ ಕೆ.ಎನ್. ಗಂಗಾಧರ ಆಳ್ವ ಸ್ವಾಗತಿಸಿ ಪರಿಚಯಿಸಿದರು. ಉಪನ್ಯಾಸಕ ವೆಂಕಟೇಶ ನಾಯಕ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು