11:26 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊರೊನಾ ಲಸಿಕೆ ಕುರಿತು ಜಾಗೃತಿ ಮೂಡಿಸಲು ಬೀದಿಗಿಳಿದ ಕೆನರಾ ಕಾಲೇಜಿನ ಎನ್ನೆಸ್ಸೆಸ್ ವಿದ್ಯಾರ್ಥಿಗಳು 

21/04/2021, 14:24

ಮಂಗಳೂರು(reporterkarnataka news):

ಕೊವಿಡ್ -೧೯ ರೋಗವನ್ನು ತಡೆಗಟ್ಟುವ ಉದ್ದೇಶದಿಂದ ದೇಶಾದ್ಯಂತ ಲಸಿಕೆ ಆಂದೋಲನ ನಡೆಯುತ್ತಿದ್ದು, ಈ ಪ್ರಯುಕ್ತ ಪ್ರಧಾನ ಮಂತ್ರಿಗಳು ಕರೆನೀಡಿದ ಲಸಿಕೆ ಉತ್ಸವದಲ್ಲಿ ಕೆನರಾ ಕಾಲೇಜಿನ ಎನ್ ಎಸ್ ಎಸ್ ಸ್ವಯಂಸೇವಕರು ಸಕ್ರಿಯವಾಗಿ ಭಾಗವಹಿಸಿದರು.

ಮನೆ ಮನೆಗೆ ತೆರಳಿ ವ್ಯಾಕ್ಸಿನ್ ಬಗ್ಗೆ ಸವಿವರವಾದ ಮಾಹಿತಿಯನ್ನು ನೀಡಿ ಅರಿವು ಮೂಡಿಸಿ, ನಲ್ವತೈದು ವರ್ಷ ಮೇಲ್ಪಟ್ಟವರು ಲಸಿಕೆ ತೆಗೆದು ಕೊಳ್ಳುವಂತೆ ಮನವೊಲಿಸಿದರು. ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಸೆಮಿಸ್ಟರ್ ಪರೀಕ್ಷೆ ಜರುಗುತ್ತಿದ್ದರೂ ಬಿಡುವು ಮಾಡಿಕೊಂಡು ತಮ್ಮ ಸೇವಾ ಮನೋಭಾವವನ್ನು ವ್ಯಕ್ತ ಪಡಿಸಿದ ವಿದ್ಯಾರ್ಥಿಗಳ ಈ ಗುಣ ಎಲ್ಲರಿಂದಲೂ  ಮೆಚ್ಚುಗೆಗೆ ಪಾತ್ರವಾಗಿದೆ.

ರಾಜ್ಯದ ‘ಎನ್ ಎಸ್ ಎಸ್  ಆರ್ ಡಿ ಬೆಂಗಳೂರು ‘ ಹಾಗೂ ದೇಶದ ‘ ಎನ್ ಎಸ್ ಎಸ್ ಇಂಡಿಯಾ’ ಅಧಿಕೃತ ಯು ಟ್ಯೂಬ್ ಚಾನಲ್ ಹಾಗೂ ಫೇಸ್ ಬುಕ್ ಪೇಜ್ ನಲ್ಲಿ ಪ್ರಕಟಗೊಂಡಿರುವ ಈ ಕಾರ್ಯಕ್ರಮ ರಾಜ್ಯವ್ಯಾಪ್ತಿ ಮೆಚ್ಚುಗೆ ಪಡೆದುಕೊಂಡಿದೆ.

ಮಂಗಳೂರು ವಿಶ್ವವಿದ್ಯಾನಿಲಯದ ರಾ.ಸೇ.ಯೋಜನೆಯ
ಸಂಯೋಜನಾಧಿಕಾರಿ ಡಾ.ನಾಗರತ್ನ ಕೆ.ಎ. ನಿರ್ದೇಶನ ಹಾಗೂ ಕೆನರಾ ಕಾಲೇಜಿನ ಪ್ರಾಂಶುಪಾಲರಾದ  ಡಾ. ಪ್ರೇಮಲತಾ ವಿ.ಅವರ ಉಸ್ತುವಾರಿಯಲ್ಲಿ,ಕಾಲೇಜಿನ ಎನ್ ಎಸ್ ಎಸ್ ಅಧಿಕಾರಿಗಳಾಗಿರುವ ಸೀಮಾ ಪ್ರಭು ಎಸ್. ಮತ್ತು ಕಾವ್ಯಶ್ರೀ ಅವರುಗಳ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು