3:49 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಳೆ ನೀರಿನಿಂದ ತುಂಬಿ ಸಂಚಾರ ಸ್ಥಗಿತಗೊಂಡ ಬಜಾಲ್ ಅಂಡರ್ ಪಾಸ್: ಪಾಲಿಕೆ ಕಮಿಷನರ್ ಸ್ಥಳಕ್ಕೆ ಭೇಟಿ; ಪರಿಶೀಲನೆ

26/06/2024, 16:45

ಮಂಗಳೂರು(reporterkarnataka.com):ನಗರದ ಹೊರವಲಯದ ಪಡೀಲ್ ಸಮೀಪದ ಬಜಾಲ್ ನ ಅಂಡರ್ ಪಾಸ್ ನಲ್ಲಿ ಮಳೆ ನೀರು ನಿಂತು ವಾಹನ ಸಂಚಾರ ಸ್ಥಗಿತಗೊಂಡಿದ್ದು, ಸ್ಥಳಕ್ಕೆ ಮಂಗಳೂರು ಮಹಾನಗರಪಾಲಿಕೆ ಕಮಿಷನರ್ ಆನಂದ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


ಈ ಸಂದರ್ಭದಲ್ಲಿ ಪಾಲಿಕೆಯ ಸ್ಥಳೀಯ ಕಾರ್ಪೊರೇಟರ್ ಹಾಗೂ ಪಾಲಿಕೆಯ ಚೀಫ್ ಎಂಜಿನಿಯರ್ ನರೇಶ್ ಶೆಣೈ ಉಪಸ್ಥಿತರಿದ್ದರು.
ಕಳೆದ ಸರಿ ಸುಮಾರು 10-15 ವರ್ಷಗಳಿಂದ ಬಜಾಲ್ ಅಂಡರ್ ಪಾಸ್ ಸಮಸ್ಯೆ ಜೀವಂತವಾಗಿದೆ.
ಜಿಲ್ಲೆಯ ವಿವಿಧ ಭಾಗಗಳಿಂದ ಬಜಾಲ್, ಜಲ್ಲಿಗುಡ್ಡೆ, ವೀರನಗರ, ವಿಜಯನಗರ ಕಡೆಗೆ, ಎಕ್ಕೂರು, ಜಪ್ಪಿನ ಮೊಗರು ಪ್ರಯಾಣಿಸುವವರು ಇದೇ ಅಂಡರ್ ಪಾಸ್ ಮೂಲಕವೇ ಸಂಚರಿಸಬೇಕು. ಅಷ್ಟೇ ಅಲ್ಲದೆ ಜಂಕ್ಷನ್ ರೈಲ್ವೆ ಸ್ಟೇಷನಿಗೆ ಕೂಡ ಇದೇ ದಾರಿಯಾಗಿ ಸಾಗಬೇಕು. ಇದೀಗ ಸಂಚಾರ ಕಡಿತಗೊಂಡಿದೆ. ವಾಹನ ಕೆಟ್ಟು ನಿಂತಿದೆ. ಬಸ್ ಸಂಚಾರ ನಿಂತಿದೆ. ಜತೆಗೆ ಕಾಲ್ನಡಿಗೆಯಲ್ಲಿ ಕೂಡ ಈ ಅಂಡರ್ ಪಾಸ್ ಮೂಲಕ ತೆರಳಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರತಿ ವರ್ಷ ಮಳೆಗಾಲದಲ್ಲಿ ಇಲ್ಲಿ ಎರಡೆರಡು ಪಂಪ್ ಅಳವಡಿಸಿ ನೀರು ಖಾಲಿ ಮಾಡುವ ಕ್ರಿಯೆ ನಡೆಯುತ್ತಿತ್ರು. ಪಂಪ್ ಗೆ ಬಾಡಿಗೆ ಮತ್ತು ಡೀಸೆಲ್ ಹಣವನ್ನು ಸ್ಥಳೀಯಾಡಳಿತ ಭರಿಸಬೇಕಾಗಿದೆ. ಅಂದ್ರೆ ನಮ್ಮ ನಿಮ್ಮ ತೆರಿಗೆ ಹಣವನ್ನು ನೀರು ಖಾಲಿ ಮಾಡಲು ಉಪಯೋಗಿಸುತ್ತಿದ್ದರು. ಈ ವರ್ಷವೂ ಅದರ ಪುನರಾವರ್ತನೆ ಆಗಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು