10:58 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಗಿರಿಜಾ ಶಂಕರರ ಅದ್ದೂರಿ ಕಲ್ಯಾಣೋತ್ಸವ: ನಂಜುಂಡೇಶ್ವರನ ಕಾಶಿಯಾತ್ರೆ ಸಂಪನ್ನ

11/07/2024, 16:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ 2024ರ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವವು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಪೌರೋಹಿತ್ಯದಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.


ಮಂಗಳವಾರ ಬೆಳಿಗ್ಗೆಯಿಂದಲೇ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾದ ಕಲ್ಯಾಣೋತ್ಸವದಲ್ಲಿ ಬುಧವಾರ ಸಂಜೆ 5:00 ಗಂಟೆಗೆ ಶ್ರೀ ನಂಜುಂಡೇಶ್ವರರ ಕಾಶಿಯಾತ್ರೆ ನಡೆಯಿತು. ಕಾಶಿಯಾತ್ರೆಯಲ್ಲಿ ಬಣ್ಣ ಬಣ್ಣದ ಹೂವು ಹಾಗೂ ವಜ್ರ ವೈಡೂರ್ಯಗಳಿಂದ ಅಲಂಕರಿಸಲಾದ ಶ್ರೀ ನಂಜುಂಡೇಶ್ವರರ ಉತ್ಸವ ಮೂರ್ತಿಯನ್ನು ಹಲವು ಜಾನಪದ ಕಲಾ ತಂಡಗಳೊಂದಿಗೆ ದೇವಾಲಯದ ಸುತ್ತ ಮೆರವಣಿಗೆ ನಡೆಸಲಾಯಿತು.
ನಂದಿಧ್ವಜ, ನಂದಿ ಕಂಬ ಕುಣಿತ, ಹುಲಿ ವೇಷ, ವೀರಗಾಸೆ, ಪೂಜಾ ಕುಣಿತ, ಒನಕೆ ನೃತ್ಯ, ಗಾಡಿ ಗೊಂಬೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಕಾಶಿಯಾತ್ರೆಗೆ ಮೆರಗು ನೀಡಿದವು.
ಕಾಶಿಯಾತ್ರೆ ಮುಗಿಸಿ ಬಂದ ಶ್ರೀ ಯವರ ಉತ್ಸವ ಮೂರ್ತಿಯನ್ನು ದೇವಾಲಯದ ಮುಂಭಾಗ ಇರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಅಲಂಕೃತ ಶ್ರೀ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಶ್ರೀ ಯವರ ಉತ್ಸವ ಮೂರ್ತಿ ಎದುರಿಗೆ ಇರಿಸಿ ಸಂಬಂಧ ಮಾಲೆ ಕಾರ್ಯಕ್ರಮ ನಡೆಸಲಾಯಿತು.
ಸಂಬಂಧ ಮಾಲೆ ನಂತರ ಶಿವ ಪಾರ್ವತಿ ಯವರ ಉತ್ಸವ ಮೂರ್ತಿಗಳನ್ನು ದೇವಾಲಯದ ಕಲ್ಯಾಣ ಮಂಟಪದಲ್ಲಿರಿಸಿ ಶಾಸ್ತ್ರೋಕ್ತವಾಗಿ ಶುಭ ಮಕರ ಲಗ್ನದಲ್ಲಿ ಧಾರಾ ಮಹೋತ್ಸವ ನಡೆಸಲಾಯಿತು .
ಗಿರಿಜಾ ಕಲ್ಯಾಣ ಮಹೋತ್ಸವಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡು ಸೇವೆ ಸಲ್ಲಿಸಿದರು.
ಇದೇ ಸಂದರ್ಭ ಸೇವಾರ್ಥದಾರರಿಗೆ ಸುಮಂಗಲಿಯರು ಪರಸ್ಪರ ಅರಿಶಿನ ಕುಂಕುಮ, ಬಳೆ, ಹೂ ನೀಡಿ ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಆಗಮಿಕರಾದ ಈ ನಾಗಚಂದ್ರ ದೀಕ್ಷಿತ್ ಮಾತನಾಡಿ ಗಿರಿಜಾ ಕಲ್ಯಾಣ ಮಹೋತ್ಸವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮಕ್ಕೆ ಬಂದ ಭಕ್ತರೊಬ್ಬರು ಮಾತನಾಡಿ ಗಿರಿಜಾ ಕಲ್ಯಾಣೋತ್ಸವದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಸತೀಶ್ ದಂಪತಿಗಳು ಸೇರಿದಂತೆ ದೇವಾಲಯದ ಅರ್ಚಕ ವೃಂದ ದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು