10:06 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ತುಂಬಿದ ಹಳ್ಳದಲ್ಲಿ ಕೊಚ್ಚಿ ಹೋಗಿ ಕೃಷಿಕ ಸಾವು: ತೀರ್ಥಹಳ್ಳಿಯ ದೇವಂಗಿ ಬಳಿ ದುರ್ಘಟನೆ

31/07/2024, 20:06

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ತೀರ್ಥಹಳ್ಳಿ ತಾಲೂಕಿನಲ್ಲಿ ಪುಷ್ಯ ಮಳೆಯ ಆರ್ಭಟ ಹೆಚ್ಚಾಗಿದ್ದು ಈ ಮಳೆಗೆ ತಾಲೂಕಿನಲ್ಲಿ ಮೂರನೇ ಬಲಿಯಾಗಿದೆ.
ದೇವಂಗಿ ಬಳಿ ಉಂಟೂರು ಹಳ್ಳ ದಾಟುವಾಗ ತೇಲಿ ಹೋಗಿ ರೈತರೊಬ್ಬರು ಮೃತಪಟ್ಟಿದ್ದಾರೆ. ಬುಧವಾರ ತೋಟದ ಪಕ್ಕದ ಹಳ್ಳದಲ್ಲಿ ಶವ ಸಿಕ್ಕಿದೆ.
ಕೃಷ್ಣಮೂರ್ತಿ ನಾಯ್ಕ್ (55) ಮೃತಪಟ್ಟ ವ್ಯಕ್ತಿ. ಇವರು ಮಂದಾರ್ತಿ ಮೇಳದ ಪ್ರಸಿದ್ಧ ಯಕ್ಷಗಾನ ಕಲಾವಿದ ಪ್ರಸನ್ನ ಅವರ ತಂದೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ, ಒಂದು ಹೆಣ್ಣು ಮತ್ತು ಒಂದು ಗಂಡು ಮಕ್ಕಳನ್ನು ಆಗಲಿದ್ದಾರೆ.
ತುಂಗಾ ನದಿಯ ನೀರಿನ ಮಟ್ಟ ಹೆಚ್ಚಳವಾಗಿದ್ದು ಇದೆ ನದಿಯ ವ್ಯಾಪ್ತಿಗೆ ಬರುವ ಉಂಟೂರು ಹಳ್ಳದಲ್ಲೂ ಭಾರೀ ನೀರು ಹರಿಯುತ್ತಿದ್ದು ಮಂಗಳವಾರ ಸಂಜೆ ದೇವಂಗಿಗೆ ಕೂಲಿ ಕೆಲಸಕ್ಕೆ ಹೋಗಿ ಸಂಜೆ ಬರುವಾಗ ಕೃಷ್ಣಮೂರ್ತಿ ನಾಪತ್ತೆಯಾಗಿದ್ದರು. ಮನೆಯವರೆಲ್ಲ ರಾತ್ರಿ ಇಡೀ ಹುಡುಕಿದರೂ ಪತ್ತೆಯಾಗಿರಲಿಲ್ಲ. ಮಂಗಳವಾರ ಸುರಿದ ಮಳೆಗೆ ಹಳ್ಳದಲ್ಲಿ ನೆರೆ ಬಂದಿತ್ತು. ಕಾಲು ಜಾರಿ ಹಳ್ಳಕ್ಕೆ ಬಿದ್ದು ತೇಲಿ ಹೋಗಿದ್ದು ಬುಧವಾರ ಬೆಳಗ್ಗೆ ಶವ ಪತ್ತೆಯಾಗಿದೆ.
ಸ್ಥಳಕ್ಕೆ ಪೊಲೀಸರು, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಶೈಲಾ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಆಶಾಲತಾ, ಕಂದಾಯ ಇಲಾಖೆ ಅಧಿಕಾರಿ ಸಂತೋಷ್ ಕುಮಾರ್, ಆರ್ ಐ ಸುಗುಣೇಶ್, ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಯಕ್ಷಗಾನ ಕಲಾವಿದರಾದ ಬಿ ಗಣಪತಿ ಸೇರಿ ಹಲವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು