2:11 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಂಜನಗೂಡು: ರಸ್ತೆ ದುರಸ್ತಿಗಾಗಿ ಗ್ರಾಮಸ್ಥರ ಜಾಥಾ; ಪಿಡಬ್ಲ್ಯುಡಿ ಇಲಾಖೆ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ

01/08/2024, 21:29

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ಗುಂಡಿಯಲ್ಲಿ ರಸ್ತೆಯೋ, ರಸ್ತೆಯಲ್ಲಿ ಗುಂಡಿಯೋ ಎಂಬಂತೆ ಹಳ್ಳ ಗುಂಡಿ ಬಿದ್ದು ಕಿತ್ತು ಹೋಗಿರುವ ದೇವರಸನಹಳ್ಳಿ ಮುಖ್ಯರಸ್ತೆಯನ್ನು ಕೂಡಲೇ ದುರಸ್ತಿಪಡಿಸುವಂತೆ ಒತ್ತಾಯಿಸಿ ಗ್ರಾಮಸ್ಥರು ಪಾದಯಾತ್ರೆ ನಡೆಸಿ ಸರ್ಕಾರ ಹಾಗೂ ಜನಪ್ರತಿನಿಧಿಗಳ ಗಮನ ಸೆಳೆಯುವ ಮೂಲಕ ನಂಜನಗೂಡಿನಲ್ಲಿ ಪ್ರತಿಭಟನೆ ನಡೆಸಿದರು.


ಪಟ್ಟಣದ ಹಳ್ಳದ ಕೇರಿಯಿಂದ ಪ್ರತಿಭಟನಾ ಜಾಥಾ ಹೊರಟ ಆ ಭಾಗದ ಗ್ರಾಮಸ್ಥರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ರಸ್ತೆ ದುರಸ್ತಿ ಪಡಿಸುವಂತೆ ಒತ್ತಾಯಿಸಿ ನಾಮಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗುತ್ತಾ ಸಾಗಿದರು
ದೇಣಿಗೆಯ ಡಬ್ಬ ಹಿಡಿದು ಸಾರ್ವಜನಿಕರು ರಸ್ತೆ ದುರಸ್ತಿಗೆ ಹಣ ಸಹಾಯ ಮಾಡಿ ಎಂದು ಸರ್ಕಾರದ ವಿರುದ್ಧ ಅಣುಕು ಪ್ರದರ್ಶನ ಸಹ ಮಾಡಿದರು
ದೇವರಸನಹಳ್ಳಿ, ಹೊಸೂರು, ಉಪ್ಪಿನ ಹಳ್ಳಿ
ಸಿಂಗಾರಿಪುರ , ಶ್ರೀನಗರ ಹಾಗೂ ಮಾಡ್ರಳ್ಳಿ ಗ್ರಾಮಸ್ಥರು ಆ ಭಾಗದ ಆಟೋ ಚಾಲಕರು ಜಾಥಾ ನಡೆಸಿ ಬಳಿಕ ಲೋಕೋಪಯೋಗಿ ಇಲಾಖೆ ಮುಂಭಾಗ ಜಮಾಯಿಸಿ ಪ್ರತಿಭಟನೆ ನಡೆಸಿದರು.
ಸರ್ಕಾರ ಹಾಗೂ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬಳಿಕ ಗ್ರಾಮದ ಮುಖಂಡ ಮಹದೇವ್ ಹಾಗೂ ದೇವರಾಜ್ ಮಾತನಾಡಿ, ಹಲವಾರು ವರ್ಷಗಳಿಂದ ಯಾವುದೇ ಸರ್ಕಾರಗಳು ಹಾಗೂ ಶಾಸಕರು ಬಂದರೂ ಈ ರಸ್ತೆಯನ್ನು ದುರಸ್ತಿ ಪಡಿಸದೆ ಇರುವುದರಿಂದ ರಸ್ತೆಯಲ್ಲಿ ಹಳ್ಳ ಕೊಳ್ಳಗಳು ಗುಂಡಿಗಳು ಬಿದ್ದು ತಿರುಗಾಡುವುದಕ್ಕೆ ಯೋಗ್ಯವಾಗಿಲ್ಲ ಇದರಿಂದ ವಿದ್ಯಾರ್ಥಿಗಳಿಗೆ, ವಯೋವೃದ್ದರಿಗೆ, ಗರ್ಭಿಣಿ ಬಾಣಂತಿಯರಿಗೆ ತಿರುಗಾಡಲು ತೊಂದರೆಯಾಗಿದೆ. ಅಲ್ಲದೆ ಹಲವರು ರಸ್ತೆಯಲ್ಲಿ ಬಿದ್ದು ಗಾಯಗೊಂಡಿರುತ್ತಾರೆ. ಈಗಾಗಲೇ ನೂತನ ಶಾಸಕರಾದಿಯಾಗಿ ಸಿಎಂ ಸಿದ್ದರಾಮಯ್ಯನವರೆಗೂ ಮನವಿ ನೀಡಿ ಸಾಕಾಗಿದೆ. ಹಾಗಾಗಿ ಇನ್ನು 40 ದಿನಗಳ ಒಳಗಾಗಿ ಈ ರಸ್ತೆಯನ್ನು ದುರಸ್ತಿ ಪಡಿಸದೆ ಹೋದಲ್ಲಿ ನಂಜನಗೂಡು ಬಂದ್ ಮಾಡಿ ಪ್ರತಿನಿತ್ಯ ಲೋಕೋಪಯೋಗಿ ಇಲಾಖೆ ಕಚೇರಿ ಮುಂಭಾಗ ನಿರಂತರವಾಗಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿ ಪ್ರತಿಭಟನೆಯ ಬಗ್ಗೆ ತಿಳಿಸಿದರು.
ನಂತರ ತಹಸೀಲ್ದಾರ್ ಕಚೇರಿ ಅಧಿಕಾರಿಗಳ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿ ರಸ್ತೆ ದುರಸ್ತಿಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವೆಂಕಟೇಶ್ ಸದಸ್ಯರುಗಳಾದ ಗೋವರ್ಧನ್, ಮಂಜುನಾಥ್ , ಸ್ವಾಮಿ ಗೌಡ, ಮಾಡ್ರಳ್ಳಿ ಮಲ್ಲೇಶ್, ಕೃಷ್ಣ, ಉಪ್ಪಿನಳ್ಳಿ ಮಹದೇವ್, ಸಿಂಗಾರಿಪುರ ಸುಂದರೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು