1:00 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರು?: ಹೊಸ ವೇಳಾಪಟ್ಟಿಗೆ ಸಿದ್ಧತೆ

25/08/2021, 09:36

ಮಂಗಳೂರು(reporterkarnataka.com):

ಕೋವಿಡ್ ಭೀತಿಯ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಮಂಗಳೂರು–ವಿಜಯಪುರ ದೈನಂದಿನ ಎಕ್ಸ್‌ಪ್ರೆಸ್‌ ರೈಲು ಮತ್ತೆ ಶುರುವಾಗಲಿದ್ದು, ಹೊಸ ವೇಳಾಪಟ್ಟಿ ಸಿದ್ದವಾಗುತ್ತಿದೆ.

ರೈಲು ಆರಂಭದ ಬಗ್ಗೆ ಈಗಾಗಲೇ ನೈರುತ್ಯ ರೈಲ್ವೆ ಪ್ರಸ್ತಾವ ಸಲ್ಲಿಸಿದ್ದು, ಇದೀಗ ವೇಳಾಪಟ್ಟಿಯನ್ನು ಪರಿಷ್ಕರಿಸುವಂತೆ ಸಂಸದ ನಳಿನ್‌ಕುಮಾರ್ ಕಟೀಲ್‌ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರಿಗೆ ಮನವಿ ಮಾಡಿದ್ದಾರೆ.

ಹೊಸ ಪ್ರಸ್ತಾವದ ಪ್ರಕಾರ ರೈಲು ಮಂಗಳೂರು ಜಂಕ್ಷನ್‌ ನಿಲ್ದಾಣಕ್ಕೆ ಮಧ್ಯಾಹ್ನ 12.40ಕ್ಕೆ ಬರಲಿದ್ದು, ಸಂಜೆ 4.30ಕ್ಕೆ ಇಲ್ಲಿಂದ ಹೊರಡಲಿದೆ. ಈ ವೇಳಾಪಟ್ಟಿಯಿಂದ ಕರಾವಳಿಯ ಜನರಿಗೆ ತೊಂದರೆ ಆಗಲಿದೆ. ಈಗಾಗಲೇ ರೈಲ್ವೆ ಬಳಕೆದಾರರ ಸಂಘ, ಸಾರ್ವಜನಿಕರಿಗೆ ನೈರುತ್ಯ ರೈಲ್ವೆಗೆ ಮನವಿ ಸಲ್ಲಿಸಲಾಗಿದ್ದು, ವೇಳಾಪಟ್ಟಿ ಪರಿಷ್ಕರಿಸುವಂತೆ ವಿನಂತಿಸಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮಂಗಳೂರು–ವಿಜಯಪುರ ರೈಲಿನ ವೇಳಾಪಟ್ಟಿ ಪರಿಷ್ಕರಿಸಬೇಕು. ಈ ರೈಲು ಬೆಳಿಗ್ಗೆ 9.30ಕ್ಕೆ ಮಂಗಳೂರು ಜಂಕ್ಷನ್‌ ತಲುಪಬೇಕು. ಸಂಜೆ 5.30ಕ್ಕೆ ಇಲ್ಲಿಂದ ಹೊರಡುವಂತೆ ಮಾಡಬೇಕು. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಹೇಳಿದ್ದಾರೆ.

ಈ ವೇಳಾಪಟ್ಟಿಯಲ್ಲಿ ರೈಲು ನಿಲುಗಡೆಗೆ ಅನಾನುಕೂಲ ಆದಲ್ಲಿ, ರೈಲನ್ನು ಬಂದರಿನ ಗೂಡ್‌ಶೆಡ್‌ ಯಾರ್ಡ್‌ ಅಥವಾ ಉಳ್ಳಾಲ ನಿಲ್ದಾಣ ಗಳಲ್ಲಿ ನಿಲುಗಡೆ ಮಾಡಲು ಅವಕಾಶ ವಿದೆ. ಸಮಯಕ್ಕೆ ಸರಿಯಾಗಿ ಹೊರ ಡುವ ನಿಲ್ದಾಣಕ್ಕೆ ತರಬಹುದಾಗಿದೆ ಎಂದು ಸಲಹೆ ನೀಡಿದ್ದಾರೆ

ಇತ್ತೀಚಿನ ಸುದ್ದಿ

ಜಾಹೀರಾತು