4:33 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ತಲೆಖಾನ: ಗಂಡುಗಲಿ ಕುಮಾರರಾಮ ಜಯಂತಿ ಆಚರಣೆ: ಸಮಾಧಿ ಸ್ಥಳದಲ್ಲಿ ಭಾವಪೂರ್ಣ ನುಡಿನಮನ

25/08/2021, 09:43

ವಿರುಪಾಕ್ಷ ಸ್ವಾಮಿ ಸಾಲುಮಠ ಅಂತರಗಂಗೆ ರಾಯಚೂರು
info.reporterkarnataka@gmail.com

ಮುಸ್ಕಿ ತಾಲೂಕಿನ ತಲೆಕಾನ್ ಗ್ರಾಮದಲ್ಲಿ ಸುಲ್ತಾನರಿಗೆಸಿಂಹಸ್ವಪ್ನವಾಗಿ 64 ಯುದ್ಧ ತಂತ್ರ ನಿಪುಣನಾಗಿದ್ದ ಗಂಡುಗಲಿ ಕುಮಾರರಾಮ ಅವರ ಜಯಂತಿ ಆಚರಿಸಲಾಯಿತು.

ದಕ್ಷಿಣ ಭಾರತದಲ್ಲಿ ಶೌರ್ಯ ಪರಾಕ್ರಮ ಮೆರೆದ, ಕನ್ನಡ ನಾಡಿನ ನೆಲ- ಜಲ-  ಭಾಷೆ- ಸಂಸ್ಕೃತಿ ಉಳಿಸಲು ಹೋರಾಡಿದ ವೈರಿಗಳಿಗೆ ಸಿಂಹಸ್ವಪ್ನ ನಾದ ಗಂಡುಗಲಿ ಕುಮಾರರಾಮ ಜಯಂತಿಯನ್ನು ಪೂಜ್ಯ ಆತ್ಮಾನಂದ ಸ್ವಾಮೀಜಿಗಳ ನೇತೃತ್ವದಲ್ಲಿ ತಲೆಖಾನ್ ಗ್ರಾಮದಲ್ಲಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಉಸ್ಕಿಹಾಳ ವಾಲ್ಮೀಕಿ ಮಠದ ಶ್ರೀ ಆತ್ಮಾನಂದ ಸ್ವಾಮೀಜಿಗಳು ಗ್ರಾಮದ ಸಮಾಧಿ ಬಳಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ,

 ವಾಲ್ಮೀಕಿ ಕುಲ ತಿಲಕ ಕುಮಾರರಾಮ ಪರನಾರಿ ಸಹೋದರತ್ವ ಭಾವನೆಯ ಆದರ್ಶಗಳನ್ನು ಸಂಸ್ಕೃತಿ, ಆಚಾರ ವಿಚಾರಗಳನ್ನು ಇಂದಿನ ಯುವ ಜನಾಂಗ ರೂಢಿಸಿಕೊಳ್ಳಬೇಕು. ಆತನ ಪರಾಕ್ರಮ, ಜನಪರ ಆಡಳಿತ ವೈಖರಿ, ಯುದ್ಧ ನೀತಿ, ಮಾನವೀಯ ಮೌಲ್ಯಗಳನ್ನು ಹೊಂದಿದ್ದನು. ಇಂತಹ ಮಹಾನ್ ವೀರನ ದೇಶ ಭಕ್ತಿ ನಾಡಿನ ರಕ್ಷಣೆಗಾಗಿ ಪ್ರಾಣ ಬಲಿದಾನ ಮಾಡಿದ್ದಾರೆ. ವಾಲ್ಮೀಕಿ ಸಮಾಜದ ಅದೆಷ್ಟೋ ರಾಜರು ತಮ್ಮ ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ತ್ಯಾಗ ಮಾಡಿದ ಸಮಾಜಕ್ಕೆ ಇಂದಿನ ಸರ್ಕಾರ ಸಮಾಜದ ಎಲ್ಲ ರೀತಿಯ ಸಹಕಾರ ಪಡೆದು ಮೀಸಲಾತಿಯಲ್ಲಿ ಮೀನಮೇಷ ಮಾಡುತ್ತಿರುವದು ವಿಷಾದನೀಯ ಸಂಗತಿಯಾಗಿದೆ. ಇನ್ನಾದರೂ ಈ ಸರ್ಕಾರ ಧೋರಣೆಯಿಂದ ಮುಕ್ತವಾಗುತ್ತಾ ಅಥವಾ ಮುಂದುವರಿಯುತ್ತಾ ಕಾದು ನೋಡಬೇಕಾಗಿದೆ ಎಂದು ಹೇಳಿದರು.

ನಂತರದಲ್ಲಿ ವಾಲ್ಮೀಕಿ ಸಮಾನ ಮನಸ್ಕರ ಸಂಘಟನೆ ಮುಖಂಡರಾದ ಅಶೋಕ ದಿದ್ದಿಗಿ ನಾಯಕ ಪ್ರಾಸ್ತಾವಿಕವಾಗಿ ಮಾತನಾಡಿ, ಬೊಲ್ಲ ಕುದುರೆ ಸವಾರಿ ಕುಮಾರರಾಮ ಜೀವನವ ಹಿನ್ನೆಲೆ, ರಾಜನೀತಿ ಬಗ್ಗೆ ಮಾತನಾಡಿದರು.

ಈ ಸಂದರ್ಭ ಶೇಖರಗೌಡ ಕಾಟಗಲ್ಲ, ಬಸವರಾಜ ತುಕ್ಕಲದಿನ್ನಿ, ಸೇತುರಾಮ ನಾಯಕ ಗೌಡೂರು,  ಕನಕಪ್ಪ ತಲೆಖಾನ, ರಮೇಶ ತಲೆಖಾನ,ಸೋಮಣ್ಣ ಲಿಂಗಸುಗೂರು, ಸೋಮಶೇಖರ ಸಿಂಧನೂರು, ಗ್ವಾಲಪ್ಪ ಉಸ್ಕಿಹಾಳ, ವೆಂಕಟೇಶ, ಅಮರೇಶ,ಜಕ್ಕಪ್ಪ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು