5:25 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಸ್ಟೀಲ್ ಸಿಟಿ ಮ್ಯಾರಥಾನ್: ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗಿ

04/08/2024, 19:05

ಗಣೇಶ ಇನಾಂದಾರ ಬಳ್ಳಾರಿ

info.reporterkarnataka@gmail.com

ಬಳ್ಳಾರಿ ನಗರದಲ್ಲಿನ ಬಳ್ಳಾರಿ ಸೈರ್ಲೆಸ್ಟ್ ರನರ್ಸ್ ಫೌಂಡೇಶನ್ ಮತ್ತು ಜೆ ಎಸ್ ಡಬ್ಲು ಸಹಯೋಗದೊಂದಿಗೆ ಅಗಸ್ಟ್ 4ರಂದು ಸ್ಟೀಲ್ ಸಿಟಿ ಮ್ಯಾರಥಾನ್ ಹಮ್ಮಿಕೊಂಡಿದ್ದು ಇದರಲ್ಲಿ ವಾಸವಿ ವಿದ್ಯಾಲಯದ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಶಾಲೆಯ ವಿದ್ಯಾರ್ಥಿಗಳು ಮ್ಯಾರಥಾನ್ ನಲ್ಲಿ ತೋರಿದ ಉತ್ಸಾಹ ಮತ್ತು ಕ್ರೀಡಾಸಕ್ತಿಯಿಂದ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಓಟದಿಂದ ಮಕ್ಕಳಲ್ಲಿ ದೈಹಿಕ ಸುಸ್ಥಿತಿಯನ್ನು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಉದ್ದೇಶ ಹೊಂದಿತ್ತು.
ವಿದ್ಯಾರ್ಥಿಗಳು ತಮ್ಮ ದೈಹಿಕ ಸಾಮರ್ಥ್ಯವನ್ನು ತೋರಿಸುದಷ್ಟೇ ಅಲ್ಲದೇ, ಆರೋಗ್ಯಕರ ಜೀವನ ಶೈಲಿಯನ್ನು ಅನುಸರಿಸುವ ಮಹತ್ವದ ಅನುಭವವನ್ನು ಹೊಂದಿದರು. ಸಾಧನೆ ಮತ್ತು ಆತ್ಮ ವಿಶ್ವಾಸದ ಭಾವನೆಯನ್ನು ಶಾಲೆಯ ಮಕ್ಕಳು ಹೊಂದಿದ್ದರು. ಶಿಕ್ಷಕರು ಮತ್ತು ಪೋಷಕರು ವಿದ್ಯಾರ್ಥಿಗಳು ಭಾಗವಹಿಸುವಿಕೆಯನ್ನು ಹೆಮ್ಮೆ ಪಟ್ಟರು. ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕೆ ಪೂರಕವಾಗಿ ಬೌದ್ಧಿಕ ಉನ್ನತಿಗೆ ಸಮಾನ ಪ್ರಾಮುಖ್ಯತೆಯನ್ನು ನೀಡುತ್ತಿದೆ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಪ್ರತಿಕ್ರಿಯೆಯು ಸಂತೃಪ್ತವಾಗಿದೆ ಎಂದು ವಾಸವಿ ಎಜ್ಯುಕೇಷನ್ ಟ್ರಸ್ಟ್ ನ ಕಾರ್ಯದರ್ಶಿಗಳಾದ ಪಿ. ಎನ್. ಸುರೇಶ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಓಟವು ಕ್ರೀಡೆಗಳಲ್ಲಿ ಅತ್ಯುತ್ತಮವಾದದ್ದು, ಓಟದ ಮುಖಾಂತರ ಮಕ್ಕಳಲ್ಲಿ ಆತ್ಮಸ್ಥೈರ್ಯ ಹಾಗೂ ಮನೋಬಲವನ್ನು ಹೆಚ್ಚಿಸುತ್ತದೆ. ನಮ್ಮ ಶಾಲೆಯಲ್ಲಿ ಕ್ರೀಡೆಗಳಿಗೆ ಹೆಚ್ಚು ಮಹತ್ವವನ್ನು ನೀಡುವುದರ ಮೂಲಕ ವಿದ್ಯಾರ್ಥಿಗಳಿಗೆ ಕ್ರೀಡಾಕೂಟಗಳು ಹಾಗೂ ಕ್ರೀಡಾಪಟುಗಳ ಬಗ್ಗೆ ಸವಿವರವಾಗಿ ಶಾಲೆಯ ಮುಖ್ಯಗುರುಗಳಾದ ವಿರೇಶ್ ರವರು ತಮ್ಮ ಮಾತುಗಳಲ್ಲಿ ತಿಳಿಸಿಕೊಟ್ಟರು.
ಈ ಮ್ಯಾರಥಾನ್ ನಲ್ಲಿ ಶಾಲೆಯ ವಿದ್ಯಾರ್ಥಿಗಳು
5 ಕಿಮೀ ಓಟಕ್ಕೆ ನೊಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳು ದೈಹಿಕ ಆರೋಗ್ಯಕ್ಕೆ ವಿದ್ಯಾಭ್ಯಾಸದಷ್ಟೇ ಪ್ರಾಮುಖ್ಯತೆಯನ್ನು ನೀಡುವ ಸಮತೋಲನಾತ್ಮಕ ಶಿಕ್ಷಣದತ್ತ ಶ್ರೀ ವಾಸವಿ ವಿದ್ಯಾಲಯವು 42 ವರ್ಷಗಳಿಂದ ಬದ್ದತೆಯನ್ನು ಹೊಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು