6:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಗೋವಾ- ಕರ್ನಾಟಕ ಸಂಪರ್ಕಿಸುವ ಕಾಳಿ ನದಿ ಹಳೆ ಸೇತುವೆ ಕುಸಿತ: ಟ್ರಕ್ ಚಾಲಕನಿಗೆ ಗಾಯ; ತಪ್ಪಿದ ಬಹು ದೊಡ್ಡ ದುರಂತ

07/08/2024, 23:09

ಕಾರವಾರ(reporterkarnataka.com): ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸದಾಶಿವಗಡದಿಂದ ಕಾರವಾರಕ್ಕೆ ಸಂಪರ್ಕ ಕಲ್ಪಿಸುವ ಹಳೆ ಕಾಳಿ ಸೇತುವೆ ಕುಸಿದು ಬಿದ್ದು ಓರ್ವ ಗಾಯಗೊಂಡಿರುವ ಆಘಾತಕಾರಿ ಘಟನೆ ನಡೆದಿದೆ.
ಉತ್ತರ ಕನ್ನಡ ಜಿಲ್ಲೆ ಭೂಕುಸಿತ ಮತ್ತು ಮಳೆ ಹಾನಿಯ ಆಘಾತದಿಂದ ಚೇತರಿಸಿಕೊಳ್ಳುತ್ತಿರುವಾಗಲೇ, ಗೋವಾ ಮತ್ತು ಕರ್ನಾಟಕವನ್ನು ಸಂಪರ್ಕಿಸುವ ಕಾಳಿ ನದಿಗೆ ಅಡ್ಡಲಾಗಿರುವ 40 ವರ್ಷಗಳ ಹಳೆಯ ಸೇತುವೆ ಕುಸಿದಿದ್ದು, ಟ್ರಕ್ ಚಾಲಕ ಗಾಯಗೊಂಡಿದ್ದಾರೆ.
ಬುಧವಾರ ನಸುಕಿನ 1 ಗಂಟೆ ಸುಮಾರಿಗೆ ಟ್ರಕ್ ಸೇತುವೆ ಮೇಲೆ ಹಾದು ಹೋಗುತ್ತಿದ್ದಾಗ ಸೇತುವೆ ಕುಸಿದಿದೆ. ಟ್ರಕ್ ಕಾರವಾರದ ಮಾರ್ಗವಾಗಿ ಮನೆಗೆ ಹೋಗುತ್ತಿದ್ದಾಗ ನದಿಗೆ ಅಡ್ಡಲಾಗಿ ಸೇತುವೆಯ ಹೆಚ್ಚಿನ ಭಾಗವು ನೀರಿನಲ್ಲಿ ಬಿದ್ದಿತು. ರಾತ್ರಿ ಗಸ್ತು ಸಿಬ್ಬಂದಿ ಘಟನೆಯನ್ನು ಗಮನಿಸಿ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.


“ಚಿತ್ತಾಕುಲ ಪೊಲೀಸ್ ಠಾಣೆ  ರಾತ್ರಿ ಗಸ್ತು ತಿರುಗುತ್ತಿದ್ದವರು ಸೇತುವೆ ಕುಸಿದಿರುವುದನ್ನು ಗಮನಿಸಿ ನಿಯಂತ್ರಣ ಕೊಠಡಿಗೆ ಎಚ್ಚರಿಕೆ ನೀಡಿದರು. ನದಿಯಲ್ಲಿ ಟ್ರಕ್ ಇತ್ತು ಮತ್ತು ಗಾಯಗೊಂಡ ವ್ಯಕ್ತಿ ಅದರ ಮೇಲಿದ್ದರು. ಸ್ಥಳೀಯ ಮೀನುಗಾರರು ತಮಿಳುನಾಡಿನ ಬಾಲ ಮುರುಗನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ರಕ್ಷಿಸಿದರು. ಅವರು ಪ್ರಸ್ತುತ ಕಾರವಾರ ವೈದ್ಯಕೀಯ ವಿಜ್ಞಾನ ಮತ್ತು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.
ಹೆದ್ದಾರಿಯಲ್ಲಿ ಸಂಚಾರವನ್ನು ನಿಲ್ಲಿಸಲಾಗಿದೆ ಮತ್ತು ತಿರುವು ಮಾರ್ಗವನ್ನು ಸೂಚಿಸಲಾಗಿದೆ.
ಚಾಲಕ ಗಾಯಗೊಂಡಿದ್ದು, ಚೇತರಿಸಿಕೊಳ್ಳುತ್ತಿದ್ದಾನೆ ಎಂದು ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡೀನ್ ಗಜಾನನ ನಾಯ್ಕ ತಿಳಿಸಿದ್ದಾರೆ.
ಈ ಸೇತುವೆಯನ್ನು ಕಾಳಿ ನದಿಯ ಮುಖಾಂತರ ನಿರ್ಮಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು