7:15 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಎಂಜಿನಿಯರಿಂಗ್ ಸ್ನಾತಕೋತ್ತರ ಪದವೀಧರ, ದೇಶವೊಂದರ ಉನ್ನತ ಸಚಿವ ಈಗ ಡೆಲಿವರಿ ಬಾಯ್ !!

25/08/2021, 21:04

ReporterKarnataka.com

ಕಾಲ ಹೇಗೆ ಬದಲಾಗುತ್ತದೆ ಎನ್ನುವುದಕ್ಕೆ ಸೈಯದ್ ಅಹ್ಮದ್ ಸಾದತ್ ಜೀವಂತ ಉದಾಹರಣೆಯಾಗಿದ್ದಾರೆ. ಒಂದು ಸಮಯದಲ್ಲಿ ದೇಶವೊಂದರ ಸಚಿವರಾಗಿದ್ದವರು ಈಗ ಡೆಲಿವರಿ ಬಾಯ್ ಆಗಿದ್ದಾರೆ.

ಅಫ್ಘಾನಿಸ್ತಾನದ ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಸೈಯದ್‌ ಅಹ್ಮದ್‌ ಸಾದತ್‌ ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ.

ಸೈಯದ್‌ ಅವರು ಅಶ್ರಫ್‌ ಘನಿ ನೇತೃತ್ವದ ಸರ್ಕಾರದಲ್ಲಿ ಸಂವಹನ ಮತ್ತು ತಂತ್ರಜ್ಞಾನ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಬಳಿಕ ಘನಿ ಜತೆ ಮನಸ್ತಾಪ ಹೊಂದಿ ಸ್ಥಾನ ತೊರೆದು ದೇಶ ಬಿಟ್ಟು ಜರ್ಮನಿಯಲ್ಲಿ ನೆಲೆಸಿದ್ದರು. ಈಗ ತಾಲಿಬಾನ್ ಸಂಪೂರ್ಣ ದೇಶದ ಮೇಲೆ ಹಿಡಿತ ಸಾಧಿಸಿದ್ದು ವಾಪಾಸಾಗುವ ಹಾಗೆಯೂ ಇಲ್ಲ.

ಈಗ ಜರ್ಮನಿಯಲ್ಲಿ ಜೀವನೋಪಾಯ ಕಂಡುಕೊಂಡಿರುವ ಅವರು ಪಿಜ್ಜಾ ಡೆಲಿವರಿ ಬಾಯ್‌ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಮಾಧ್ಯಮ ಸಂಸ್ಥೆ ಅಲ್‌ ಜಜೀರಾ(ಅರೇಬಿಕ್) ವರದಿ ಮಾಡಿದೆ.

ಮಾಹಿತಿಯ ಪ್ರಕಾರ, ಸೈಯದ್​ ಅಹ್ಮದ್​ ಶಾ ಸಾದತ್ ಅವರು ಆಕ್ಸ್​ಫರ್ಡ್​​ ವಿಶ್ವವಿದ್ಯಾಲಯದಿಂದ ಸಂವಹನ ಮತ್ತು ಎಲೆಕ್ಟ್ರಿಕ್​ ಎಂಜಿನಿಯರಿಂಗ್​ನಲ್ಲಿ ಎರಡು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಇದರ ಹೊರತಾಗಿ 13 ದೇಶಗಳ 20ಕ್ಕೂ ಹೆಚ್ಚು ಕಂಪನಿಗಳೊಂದಿಗೆ ಸಂವಹನ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು