12:39 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಅಂತರಗಂಗೆಯಲ್ಲಿ ಹೊಸ ದ್ಯಾವಮ್ಮ ಮೂರ್ತಿ  ಪ್ರತಿಷ್ಠಾಪನೆ: ಗ್ರಾಮಸ್ಥರಿಂದ ಭವ್ಯ ಮೆರವಣಿಗೆ

26/08/2021, 10:45

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ತಾಲೂಕಿನ ಹಿರೇ ಅಂತರಗಂಗೆ ಗ್ರಾಮದಲ್ಲಿ ದ್ಯಾಮಮ್ಮ ಹೊಸ ಮೂರ್ತಿಯನ್ನು ಇಲಕಲ್ಲದಿಂದ ಬಾರಿ ವಿಜ್ರಂಭಣೆಯಿಂದ ಕಳಸ ಕನ್ನಡಿ, ಭಜನೆ ಬಾಜಿ ಡೊಳ್ಳು ಸಡಗರ ಸಂಭ್ರಮದಿಂದ ಅಂತರಗಂಗೆಗೆ ತರಲಾಯಿತು.

ಸುತ್ತಮುತ್ತಲ ಗ್ರಾಮಗಳಾದ ಮ್ಯಾದರಾಳ ಹಟ್ಟಿ , ಮೆದಿಕಿನಾಳ, ಬೈಲ್ ಗುಡ್ಡ, ನಾಗರಬೆಂಚಿ, ಅಂತರಗಂಗೆ ತಾಂಡಾ ಗ್ರಾಮಸ್ಥರಿಂದ ಟ್ರ್ಯಾಕ್ಟರ್ ನಲ್ಲಿ ಭವ್ಯ ಮೆರವಣಿಗೆ ಮೂಲಕ ಜೈಕಾರ ಹಾಕುತ್ತಾ ದ್ಯಾಮಮ್ಮ ಮೂರ್ತಿಯನ್ನು ತರಲಾಯಿತು.
ದ್ಯಾಮಮ್ಮ ದೇವಿಗೆ ಪಾರ್ವತಮ್ಮ ಕಾವಲಿ ಅವರ ಪೂಜಾರಿಯಾಗಿದ್ದು, ಅವರು ನಿಧನ ಬಳಿಕ ಅವರ ಕುಟುಂಬದವರ ಸೊಸೆ ಗುಡಿ ಪೂಜೆ ಪೂಜಾರಿ ವ್ಯವಸ್ಥೆಯ ನೋಡಿಕೊಂಡು ಬರುತ್ತಿದ್ದಾರೆ. ದೂರದ ಊರಾದ ಬಳ್ಳಾರಿ, ಸಿರುಗುಂಪ, ದಢೆಸುಗುರ್,ಮುದುಗಲ್,ಲಿಂಗಸುಗೂರು ಮುಂತಾದ ಕಡೆಗಳಿಂದ ಭಕ್ತರು ದ್ಯಾಮಮ್ಮ ಗುಡಿಗೆ ದರ್ಶನ ಮಾಡಲು ಆಗಮಿಸುತ್ತಾರೆ. ಕುಷ್ಟಗಿ ಶಾಸಕರು ಅಮರೇಗೌಡ ಪಾಟೀಲ್ ಬಯ್ಯಪೂರ್ ಅನುದಾನದಲ್ಲಿ ಗುಡಿ ಕಟ್ಟಡ ನಿರ್ಮಿಸಲಾಗಿದೆ. ಮಾಜಿ ಶಾಸಕ ಪ್ರತಾಪ ಗೌಡರು ಅನುದಾನ ಕೊಟ್ಟಿದ್ದರು. 

ಮಂಗಳಾರತಿ, ಭಜನೆ, ಡೊಳ್ಳು ಕುಣಿತದೊಂದಿಗೆ ಅಮ್ಮನನ್ನು ಗುಡಿ ಒಳಗೆ ಕರೆತರಲಾಯಿತು. ಭಕ್ತರು ಸುತ್ತಮುತ್ತಲಿನ ದರ್ಶನ ಪಡೆದು ಪುನೀತರಾದರು. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಗುರಪ್ಪ ಗೋಮರ್ಸಿ, ವೀರೇಶ್ ಚಿಕ್ಕ ಅಂತರಗಂಗೆ ಗವಿಯಪ್ಪ ಗೌಡ, ದುರ್ಗಣ್ಣ ಕುರ್ಲಿ,ಈರಣ್ಣ ಕುರ್ಲಿ , ವಾಲ್ಮೀಕಿ ಸಮಾಜ ಯುವ ಮಿತ್ರರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು