4:43 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಕಾಡಬೆಟ್ಟು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಗ್ಗ ವಲಯದಿಂದ ಅಟಿದ ಲೇಸ್ ಕಾರ್ಯಕ್ರಮ

17/08/2024, 18:30

ಬಂಟ್ವಾಳ(reporterkarnataka.com): ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ವಗ್ಗ ವಲಯದ ಕಾಡಬೆಟ್ಟು ಒಕ್ಕೂಟದ ವತಿಯಿಂದ ಅಟಿದ ಲೇಸ್ ಕಾರ್ಯಕ್ರಮ ದ. ಕ. ಜಿ.ಪಂ.ಹಿರಿಯ ಪ್ರಾಥಮಿಕ ಶಾಲೆ ಕಾಡಬೆಟ್ಟು ವಗ್ಗ ಇಲ್ಲಿ ಜರಗಿತು.
ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕರಾದ ಮಹಾಬಲ ಕುಲಾಲ್ ದೀಪ ಬೆಳಗಿಸಿ ಚೆನ್ನೆಮನೆ ಆಟ ಆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಹಿಂದಿನ ಕಾಲದಲ್ಲಿ ಬಡತನದಿಂದಿದಗದರೂ ಸಂತೋಷದಿಂದ ಜೀವನ ಮಾಡುತ್ತಿದ್ದರು. ಈಗ ಬಡತನದಿಂದ ಹೊರಗಡೆ ಬಂದಿದ್ದಾರೆ. ಆದರೆ ಸಂತೋಷದ, ಆರೋಗ್ಯವಂತ ಜೀವನ ಇಲ್ಲ ಎಂದರು.
ಆಟಿ ತಿಂಗಳ ಮಹತ್ವದ ಬಗ್ಗೆ ಉಪನ್ಯಾಸ ನೀಡಿದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವಗ್ಗದ ಅಧ್ಯಕ್ಷ ಪ್ರಮೋದ್ ಕುಮಾರ್ ರೈ ಕಾಡಬೆಟ್ಟು ಮಾತನಾಡಿ ಹಿಂದಿನ ಆಟಿ ತಿಂಗಳಿಗೂ ಈಗ ಆಟಿ ತಿಂಗಳಿಗೂ ಬಹಳ ವ್ಯತ್ಯಾಸವಿದೆ. ನಮ್ಮ ಪೂರ್ವಿಕರು ಪರಿಸರದಲ್ಲಾಗುವ ಅಸಮತೋಲನದಿಂದಾಗಿ ಬರುವ ರೋಗರುಜಿನಗಳನ್ನು ತಡೆಗಟ್ಟಲು ಪ್ರಕೃತಿದತ್ತವಾದ ಆಹಾರ ಪದ್ಧತಿಗಳನ್ನು ಅನುಸರಿಸುತಿದ್ದರು. ಈಗ ಆರೋಗ್ಯ ಸಮಸ್ಯೆ ಎದುರಾದರೆ ಆಸ್ಪತ್ರೆಗೆ ಭೇಟಿ ನೀಡುವಂತಾಗಿದೆ. ಆಟಿಕೂಟಗಳನ್ನು ಮಾಡಿ ಜನರಿಗೆ ನಮ್ಮ ಆಹಾರ ಪದ್ಧತಿಯ ಮನವರಿಕೆ ಮಾಡುವ ಅವಶ್ಯಕತೆ ಇದೆ ಎಂದರು.
ವೇದಿಕೆಯಲ್ಲಿ ಕಾವಳಪಡೂರು ಗ್ರಾಮ ಪಂಚಾಯತ್ ಅಧ್ಯಕ್ಷ ಲಕ್ಷ್ಮೀನಾರಾಯಣ ಶರ್ಮ, ಕಾಡಬೆಟ್ಟು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಜಾನನ ಭಟ್, ಕಾಡಬೆಟ್ಟು ಶಾಲಾ ಮುಖ್ಯ ಶಿಕ್ಷಕಿ ಮೋಹಿನಿ ಕುಮಾರಿ ,ಬಂಟ್ವಾಳ ತಾಲೂಕು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸ್ಟರ್ ಪ್ರಕಾಶ್, ಕಾಡಬೆಟ್ಟು ಒಕ್ಕೂಟದ ಮಾಜಿ ಅಧ್ಯಕ್ಷ‌ ಚಂದಪ್ಪ ಮೂಲ್ಯ ಉಪಸ್ಥಿತರಿದ್ದರು.
ಕಾಡಬೆಟ್ಟು ಒಕ್ಕೂಟದ ಪದಾಧಿಕಾರಿಗಳು, ಪ್ರಗತಿ ಬಂದು ಸ್ವಸಹಾಯ ಸಂಘದ ಸದಸ್ಯರುಗಳು, ಶೌರ್ಯ ವಿಪತ್ತು ನಿರ್ವಹಣೆ ಘಟಕ ವಗ್ಗದ ಪ್ರತಿನಿಧಿ ಪ್ರವೀಣ್ ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.
ರೇಖಾ ಪಿ. ಪ್ರಾರ್ಥಿಸಿ,, ಲೀಲಾವತಿ ಸ್ವಾಗತಿಸಿ, ತಾರನಾಥ ಶೆಟ್ಟಿ ವಂದಿಸಿ, ಗಣೇಶ್ ಎಸ್ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು