7:14 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಇಂದಿನಿಂದ ಸಿಇಟಿ ಪರೀಕ್ಷೆ ಆರಂಭ; 530 ಕೇಂದ್ರಗಳಲ್ಲಿ  ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಬರೆಯಲಿದ್ದಾರೆ ಎಕ್ಸಾಂ

28/08/2021, 10:50

ಬೆಂಗಳೂರು(reporterkarnataka.com): ಸಿಇಟಿ ಪರೀಕ್ಷೆ (ಸಾಮಾನ್ಯ ಪ್ರವೇಶ ಪರೀಕ್ಷೆ) ಇಂದಿನಿಂದ(ಆ.28) 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ನಡೆಯಲಿದೆ. 

ಇಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ 6 ಕೇಂದ್ರಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಸಿದ್ದು, ಕೋವಿಡ್ ಮುನ್ನೆಚ್ಚರಿಕೆಗಳೊಂದಿಗೆ ಪರೀಕ್ಷೆ ನಡೆಸಲು ಕ್ರಮ ತೆಗೆದು ಕೊಳ್ಳಲಾಗಿದೆ ಎಂದರು.

ಪರೀಕ್ಷೆ ದಿನದಂದು ಗೃಹ ಇಲಾಖೆಯ ಸೂಕ್ತ ಪೊಲೀಸ್ ವ್ಯವಸ್ಥೆ ಮಾಡಿದ್ದು, 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು ಆಯೋಜಿಸಲಾಗಿದೆ. ಸಾಮಾನ್ಯ ಪ್ರವೇಶ ಪರೀಕ್ಷೆಯು ಕೇವಲ ಒಂದು ಗಂಟೆ 20 ನಿಮಿಷಗಳನ್ನು ಪ್ರತಿ ಪೇಪರ್‌ಗೆ ನೀಡಲಾಗಿರುತ್ತದೆ.ಒಟ್ಟಾರೆ ಪರೀಕ್ಷೆಯು 180 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಆ.30ರಂದು ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಜತೆಗೆ 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಯನ್ನು ಈ ಕಾರ್ಯಕ್ಕಾಗಿ ನಿಯೋಜಿಸಲಾಗಿದೆ.

ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಹಾಗೂ ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು