7:19 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: 5 ಮಂದಿ ಪೊಲೀಸ್ ವಶಕ್ಕೆ

28/08/2021, 15:24

ಮೈಸೂರು(reporterkarnataka.com): ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದ ಬಳಿ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಮಂದಿ ಶಂಕಿತ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಮೈಸೂರು ನಗರ ಪೊಲೀಸರು 5 ತಂಡಗಳನ್ನು ರಚನೆ ಮಾಡಿ ಬಲೆ ಬೀಸಿದ್ದರು. ವಿದ್ಯಾರ್ಥಿನಿಯ ಸ್ನೇಹಿತ ಘಟನೆಗೆ ಸಂಬಂಧಿಸಿದಂತೆ ನೀಡಿದ

ಮಾಹಿತಿ ಮೇಲೆ ಹಾಗೂ ಮೊಬೈಲ್ ಟವರ್ ಆಧರಿಸಿ ಆರೋಪಿಗಳ ಜಾಡು ಪತ್ತೆ ಹಚ್ಚಿದ್ದಾರೆ.

ಮೈಸೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ ತಮಿಳುನಾಡಿನ ಮೂವರು, ಕೇರಳದ ಓರ್ವ ಹಾಗೂ ಮೈಸೂರು ನಗರದ ಒಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. 

ಸದ್ಯ ಆರೋಪಿಗಳನ್ನು ತಮಿಳುನಾಡು ಮತ್ತು ಕೇರಳದಿಂದ ಮೈಸೂರಿಗೆ ಕರೆದು ತರಲಾಗುವುದು.ಘಟನೆಗೆ ಸಂಬಂಧಪಟ್ಟಂತೆ ಈಗಾಗಲೇ ಸುಮಾರು 25 ಕ್ಕೂ ಹೆಚ್ಚು ಮಂದಿಯ ವಿಚಾರಣೆ ನಡೆಸಲಾಗಿದೆ. ಪೊಲೀಸರು ಸ್ಥಳದಲ್ಲಿ ದೊರಕಿದ ಮದ್ಯದ ಬಾಟಲಿಗಳ ಆಧಾರದ ಮೇಲೆ ಸುತ್ತಾ ಮುತ್ತ ಇರುವ ಮದ್ಯದಂಗಡಿ ಜಾಲಾಡಿ ಅಲ್ಲಿನ ಸಿಸಿ ಟಿವಿ ಫೊಟೇಜ್ ಪಡೆದು ಆರೋಪಿಗಳನ್ನು ಪತ್ತೆ ಹಚ್ಚಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು