7:41 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕಲ್ಲಿದ್ದಲು ಅಕ್ರಮ ಹಣವರ್ಗಾವಣೆ ಪ್ರಕರಣ : ಮಮತಾ ಬ್ಯಾನರ್ಜಿ ಸೋದರಳಿಯನಿಗೆ ಸಮನ್ಸ್ ಜಾರಿ

28/08/2021, 15:40

ಕೊಲ್ಕತ್ತಾ (Reporterkarnataka.com)

ಕಲ್ಲಿದ್ದಲು ಹಗರಣ ಅಕ್ರಮ ಹಣ ವರ್ಗಾವಣೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋದರಳಿಯ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಮತ್ತು ಅವರ ಪತ್ನಿಗೆ ಜಾರಿ ನಿರ್ದೇಶನಾಲಯ(ಇಡಿ) ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡೈಮಂಡ್ ಹಾರ್ಬರ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಅಭಿಷೇಕ್ ಬ್ಯಾನರ್ಜಿ, ತೃಣಮೂಲ ಕಾಂಗ್ರೆಸ್(TMC)ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.

ಸೆಪ್ಟೆಂಬರ್ 6 ರಂದು ಪ್ರಕರಣದ ತನಿಖಾ ಅಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗುವಂತೆ ಅಭಿಷೇಕ್ ಬ್ಯಾನರ್ಜಿಗೆ ಇಡಿ ಸಮನ್ಸ್ ನೀಡಿದ್ದು, ಅವರ ಪತ್ನಿ ರುಜಿರಾ ಅವರಿಗೂ ಇದೇ ರೀತಿಯ ಸಮನ್ಸ್ ಕಳುಹಿಸಲಾಗಿದೆ.

ಮುಂದಿನ ತಿಂಗಳು ಬೇರೆ ಬೇರೆ ದಿನಾಂಕಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಪ್ರಕರಣಕ್ಕೆ ಸಂಬಂಧಪಟ್ಟ ಕೆಲವರಿಗೆ ಸಮನ್ಸ್ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2020ರ ನವೆಂಬರ್‌ನಲ್ಲಿ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್ ಗಣಿಗಳಿಗೆ ಸಂಬಂಧಿಸಿದ ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿದಂತೆ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಎಫ್‌ಐಆರ್ ದಾಖಲಿಸಿತ್ತು. ನಂತರ ಪಿಎಂಎಲ್ಎ ಕಾಯ್ದೆ ಅಡಿ ಟಿಎಂಸಿ ನಾಯಕನ ವಿರುದ್ಧ ಇಡಿ ಕೇಸ್ ದಾಖಲಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು