4:03 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೆಲರಾಯ್ ಯಲ್ಲಿ ‘ಗಾದ್ಯಾಂತ್ ಗಮ್ಮತ್’: ಕೃಷಿಕ ಜ್ಯೂಡ್ ಕರ್ನೆಲಿಯೊ ಅವರಿಗೆ ಸನ್ಮಾನ

03/09/2024, 23:24

ಮಂಗಳೂರು(reporterkarnataka.com): ಸಂತ ಅನ್ನಾ ಚರ್ಚ್ ಕೆಲರಾಯ್, ಇಲ್ಲಿನ ‘ಭಾರತೀಯ ಕಥೋಲಿಕ್ ಯುವ ಸಂಚಾಲನ’ವು ಭಾನುವಾರ ‘ಗಾದ್ಯಾಂತ್ ಗಮ್ಮತ್’ (ಗದ್ದೆಯಲ್ಲಿ ಗಮ್ಮತ್) ಎಂಬ ಕಾರ್ಯಕ್ರಮವನ್ನು ಕೆಲರಾಯ್ ತಾರಿಗುಡ್ಡೆ ಗದ್ದೆಯಲ್ಲಿ ಆಯೋಜಿಸಿತ್ತು.


ಬೆಳಿಗ್ಗೆ 9.30 ಗಂಟೆಗೆ ಸಂತ ಅನ್ನಾ ದೇವಾಲಯದ ಧರ್ಮಗುರುಗಳಾದ ಫಾ| ಸಿಲ್ವೆಸ್ಟರ್ ಡಿಕೋಸ್ಟಾರವರು ಆಶೀರ್ವಚನದ ಮೂಲಕ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿದರು. ಐಸಿವೈಎಮ್ ಸಚೇತಕರಾದ ವಿನೋದ್ ಪಿರೇರಾ, ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಸಂತೋಷ್ ಡಿಕೋಸ್ಟಾ, ಕಾರ್ಯದರ್ಶಿ ಸೆಲಿನ್ ಡಿಮೆಲ್ಲೊ, ಫಾ| ರೋಶನ್ ಫೆರ್ನಾಂಡಿಸ್, ಕಾರ್ಪರೇಟರ್ ರಘು ಸಾಲಿಯಾನ್, ಜಯಂತಿ ದೇವಸ ಮುಂತಾದ ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಪಿಂಗಾರ ಅರಳಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರ್ವಧರ್ಮಗಳ ಸಹಕಾರದಿಂದ ಈ ಕಾರ್ಯಕ್ರಮಕ್ಕೆ ಕಳೆಬಂದಿತ್ತು.
ಅನೇಕ ವರ್ಷಗಳಿಂದ ತೆನೆಹಬ್ಬಕ್ಕೆ ತೆನೆಯನ್ನು ದಾನ ಮಾಡುತ್ತಿರುವ ಕೃಷಿಕ ಜ್ಯೂಡ್ ಕರ್ನೆಲಿಯೊ ಇವರಿಗೆ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ‘ಪೆಪ್ಸಿ ಲಕ್ಕಿ ಡ್ರಾ’ದಲ್ಲಿ ಅನೇಕರು ಭಾಗವಹಿಸಿ ಬಹುಮಾನ ಗೆದ್ದರು. ಸರ್ವರಿಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು. ವಿವಿಧ ಸ್ಪರ್ಧೆಗಳನ್ನು ಬೆಳಿಗ್ಗೆ 10ರಿಂದ ಸಂಜೆ 5 ರ ತನಕ ನಡೆಸಿ, ಸಂಜೆಯ ಸಮಾರೋಪ ಸಮಾರಂಭದಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಬಂದಂತಹ ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಮನೀಶಾ ಡಿಸೋಜಾ ಸ್ವಾಗತಿಸಿ, ಅಲಿಷಾ ಕ್ರಾಸ್ತಾ ಧನ್ಯವಾದ ಸಮರ್ಪಣೆ ಗೈದರು.
ಕಾರ್ಯಕ್ರಮವನ್ನು ಸಂತೋಷ್ ಡಿಕೋಸ್ಟಾ ಹಾಗೂ ಬೆನೊಯ್ ಡಿಸೋಜಾ ನಡೆಸಿಕೊಟ್ಟರು. ಸಣ್ಣ ಮಕ್ಕಳಿಂದ ಹಿಡಿದು ವೃಯೋವೃದ್ಧರವರೆಗೆ ಎಲ್ಲರೂ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಕೆಸರಿನ ಗದ್ದೆಯಲ್ಲಿ ಆನಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು