4:53 AM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಕುಲಶೇಖರ ಚರ್ಚ್ ಸಭಾಭವನದಲ್ಲಿ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್

07/09/2024, 20:17

ಮಂಗಳೂರು (reporterkarnataka.com) : ಕಡಲನಗರಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಸೆಲ್ಫ್​ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ‘ಶೌರ್ಯ’ ಕರಾಟೆ ಚಾಂಪಿಯನ್‌ಶಿಪ್, ನಗರದ ಕುಲಶೇಖರ ಚರ್ಚ್ ಸಭಾಭವನದಲ್ಲಿ ಆರಂಭವಾಗಿದ್ದು, ಸೆ. 8 ರವರೆಗೆ ನಡೆಯಲಿದೆ.
ಅಂತಾರಾಷ್ಟ್ರೀಯ ಮಟ್ಟದ ಈ ಸ್ಪರ್ಧೆಯಲ್ಲಿ, ದೇಶ – ವಿದೇಶಗಳ 1,500ಕ್ಕೂ ಅಧಿಕ ಕರಾಟೆ ಪಟುಗಳು ಭಾಗವಹಿಸಿದ್ದಾರೆ.
ಜಪಾನ್, ಶ್ರೀಲಂಕಾ,ಮಲೇಷ್ಯಾ,`ಜೋರ್ಡಾನ್, ತಾಂಜಾನಿಯಾ ಮುಂತಾದ ದೇಶಗಳಿಂದ ತಂಡಗಳು ಭಾಗವಹಿಸುತ್ತಿವೆ. ಮುಖ್ಯ ತೀರ್ಪುಗಾರರು ಕರಾಟೆಯ ಕೇಂದ್ರಸ್ಥಾನ ಜಪಾನ್‌ನಿಂದ ಆಗಮಿಸಿದ್ದಾರೆ. ವಿಜೇತರಿಗೆ ಸರ್ಟಿಫಿಕೆಟ್ ಹಾಗೂ ಪದಕ ನೀಡಲಾಗುತ್ತಿದೆ. ಮೊದಲ ದಿನ 6 ರಿಂದ 14 ವರ್ಷದೊಳಗಿನ ಎಲ್ಲ ವಿಧದ ಕಲರ್ ಬೆಲ್ಟ್​ಗಳ ಕರಾಟೆ ಪಟುಗಳಿಗೆ ಸ್ಪರ್ಧೆ ನಡೆಯಿತು. ಸೆ. 7ರಂದು 14 ವರ್ಷ ಮೇಲ್ಪಟ್ಟವರಿಗೆ ಪಂದ್ಯಾಟ ಜರುಗಿತು. 8 ರಂದು ಕಪ್ಪುಬೆಲ್ಟ್​ನವರ ಪಂದ್ಯಗಳು ನಡೆಯಲಿವೆ. ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕರಾಟೆ ಪಂದ್ಯಾವಳಿ ನಡೆಯುತ್ತಿದೆ. ಕೋರ್ಡೆಲ್ ಹಾಲ್‌ನ ಒಳಭಾಗವನ್ನು ಮ್ಯಾಟ್ ಹಾಕಿ ಕರಾಟೆ ಪಂದ್ಯಾಟ ನಡೆಯುತ್ತಿದೆ.1,500 ರಷ್ಟು ಕರಾಟೆ ಪಟುಗಳು, ಜತೆಗೆ ತೀರ್ಪುಗಾರರು, ಟೀಂ ಮ್ಯಾನೇಜರ್‌ಗಳು ಪಾಲ್ಗೊಳ್ಳುತ್ತಿದ್ದಾರೆ. ಏಕಕಾಲದಲ್ಲಿ 7 ರಿಂದ 9 ಪಂದ್ಯಗಳನ್ನು ನಡೆಸಬಹುದಾಗಿದೆ. ವೈಯುಕ್ತಿಕ ಕಟಾ, ಟೀಂ ಕಟಾ, ಕುಮಿಟೆ ವಿಭಾಗಗಳಲ್ಲಿ ಪಂದ್ಯಾಟ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು